Advertisement

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

01:39 PM Mar 27, 2024 | Team Udayavani |

ವಿಜಯಪುರ : ಪರಿಶಿಷ್ಟ ಜಾತಿಗೆ ಮೀಸಲಿರುವ ವಿಜಯಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಂಜಾರಾ ಸಮುದಾಯಕ್ಕೆ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ನಗರದಲ್ಲಿರುವ ಬಿಜೆಪಿ ಕಚೇರಿ ಎದುರು ಬಂಜಾರಾ ಸಮಾಜದಿಂದ ಪ್ರತಿಭಟನೆ ನಡೆಸಿದರು.

Advertisement

ಬುಧವಾರ ನಗರದಲ್ಲಿರುವ ಬಿಜೆಪಿ ಕಚೇರಿ ಎದುರು ಜಮಾಯಿಸಿದ ಬಂಜಾರಾ ಸಮಾಜದ ಯುವಕರು, ಸಂಘ ಪರಿವಾರದ ಹಿನ್ನೆಲೆಯ ತಮ್ಮ ಸಮಾಜದ ಡಾ.ಬಾಬುರಾಜೇಂದ್ರ ನಾಯಿಕ ಅವರಿಗೆ ಟಿಕೆಟ್ ನೀಡದೇ ಅನ್ಯಾಯ ಮಾಡಲಾಗಿದೆ. ಕೂಡಲೇ ಪಕ್ಷದ ವರಿಷ್ಠರು ರಮೇಶ ಜಿಗಜಿಣಗಿ ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿದ್ದನ್ನು ಹಿಂಪಡೆದು ಡಾ.ಬಾಬುರಾಜೇಂದ್ರ ನಾಯಿಕ ಅವರಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಡಾ.ಬಾಬುರಾಜೇಂದ್ರ ನಾಯಿಕ ಪರ ಮಾತ್ರವಲ್ಲದೇ ಜಿಗಜಿಣಗಿ ಹಠಾವೋ, ಬಿಜೆಪಿ ಬಜಾವೋ ಎಂಬ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಒಂದು ಹಂತದಲ್ಲಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಪ್ರತಿಭಟನಾಕಾರರು, ರಮೇಶ ಜಿಗಜಿಣಗಿ ಮೂರು ಬಾರಿ ಸಂಸದರಾಗಿ, ಸಚಿವರಾಗಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಶೂನ್ಯ. ಹೀಗಾಗಿ ಕೂಡಲೇ ಬಿಜೆಪಿ ವರಿಷ್ಠರು ಘೋಷಿತ ಜಿಗಜಿಣಗಿ ಅವರ ಬದಲಾಗಿ ಡಾ.ಬಾಬುರಾಜೇಂದ್ರ ನಾಯಿಕ ಅವರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next