Advertisement

BJP: ಕಳ್ಳೆತ್ತು ವಿರುದ್ಧ ಜೋಡೆತ್ತು ಹೋರಾಟ: ಶ್ರೀರಾಮುಲು

10:45 PM Nov 18, 2023 | Team Udayavani |

ಹಾವೇರಿ: ಹೊಸ ರಾಜ್ಯಾ ಧ್ಯಕ್ಷರು ಮತ್ತು ವಿಪಕ್ಷ ನಾಯಕರ ಆಯ್ಕೆ ಬಳಿಕ ಬಿಜೆಪಿಗೆ ಮತ್ತಷ್ಟು ಶಕ್ತಿ ಬಂದಂತಾಗಿದೆ. ಅವರಿಬ್ಬರೂ ಜೋಡೆತ್ತುಗಳಂತೆ ಕೆಲಸ ಮಾಡಲಿದ್ದು, ಕಳ್ಳೆತ್ತುಗಳ ವಿರುದ್ಧ ಹೋರಾಟ ನಡೆಸಲಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು.

Advertisement

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಮತ್ತು ವಿಪಕ್ಷ ನಾಯಕರಾಗಿ ಆರ್‌.ಅಶೋಕ್‌ ಅವರನ್ನು ಆರಿಸಲಾಗಿದೆ. ಇವರಿಬ್ಬರ ಹೋರಾಟದಿಂದ ಕಳ್ಳೆತ್ತುಗಳ ನಿಜ ಬಣ್ಣ ಬಯಲಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ಅವರನ್ನು ಕುಟುಕಿದರು. ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದು ಹೋಗಿದೆ. ಅಭಿವೃದ್ಧಿ ನಿಂತ ನೀರಾಗಿದೆ. ಮೋಸ ಮಾಡಿ ಅ ಧಿಕಾರಕ್ಕೆ ಬಂದಿದ್ದಾರೆ. ಗ್ಯಾರಂಟಿ ಕೊಡಲು ಕಳ್ಳೆತ್ತುಗಳು ಕೆಲಸ ಮಾಡುತ್ತಿವೆ. ನಾಲ್ಕೈದು ತಿಂಗಳಲ್ಲೇ ಸರಕಾರದ ಬಂಡವಾಳ ಬಯಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next