Advertisement

ಸಿದ್ದರಾಮಯ್ಯರಿಗೆ ತನ್ನದು ಎನ್ನುವ ಒಂದೂ ಕ್ಷೇತ್ರವೂ ಇಲ್ಲ: ಬಿಜೆಪಿ ವ್ಯಂಗ್ಯ

04:54 PM Apr 23, 2022 | Team Udayavani |

ಬೆಂಗಳೂರು: ಮುಖ್ಯಮಂತ್ರಿಯಾಗಿದ್ದಾಗ ಭಾಗ್ಯಗಳ ಮೂಲಕ ಒಂದು ವರ್ಗಕ್ಕೆ ಹೆಚ್ಚಿನ ಆದ್ಯತೆ ನೀಡಿ, ಜಾತಿ ಜಾತಿಗಳ ಮದ್ಯೆ ಬಿರುಕು ಮೂಡಿಸಿದ ಸಿದ್ದರಾಮಯ್ಯ ಅವರಿಗೆ ತನ್ನದು ಎನ್ನುವ ಒಂದೂ ಕ್ಷೇತ್ರವೂ ಇಲ್ಲ ಎಂದು ಬಿಜೆಪಿ ವ್ಯಂಗ್ಯವಾಡಿದೆ.

Advertisement

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಬಿಜೆಪಿ,  ಕೋಲಾರ, ಹುಣಸೂರು,  ಚಾಮರಾಜಪೇಟೆ, ಕೊಪ್ಪಳ, ಮುಂದೆ? ಆಣೆರಾಮಯ್ಯ ಅವರೇ, ಬಾದಾಮಿ ಜನತೆಗೆ ನಿಮ್ಮ ಅಧಿನಾಯಕಿ ಸೋನಿಯಾ ಮೇಲೆ ಆಣೆ ಮಾಡಿ ಎಂದಿದೆ.

ಸಿದ್ದರಾಮಯ್ಯ ಅವರಿಗೆ ಕರ್ನಾಟಕ ದರ್ಶನ ಮಾಡುವ ಆಸೆಯಿದ್ದರೆ ಪ್ರವಾಸೋದ್ಯಮ ಇಲಾಖೆಯ ಮೂಲಕ ಹಲವು ಪ್ಯಾಕೇಜ್ ಪ್ರವಾಸದ ವ್ಯವಸ್ಥೆ ಮಾಡುತ್ತೇವೆ. ಅದನ್ನು ಬಿಟ್ಟು ಹಳೆ ಮೈಸೂರು, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಬೆಂಗಳೂರು ಎಂದು ವಲಸೆ ಹೋಗಬಹುದಾದ ಕ್ಷೇತ್ರಗಳ ಪಟ್ಟಿ ಮಾಡಿದರೆ ಡಿಕೆ ಶಿವಕುಮಾರ್ ಸುಮ್ಮನಿರುವರೇ ಎಂದು ವ್ಯಂಗ್ಯವಾಡಿದೆ.

ಇದನ್ನೂ ಓದಿ:ಭಟ್ಕಳ: ಕೋಟ್ಯಂತರ ರೂ. ಅವ್ಯವಹಾರ ಮಾಡಿ ಪರಾರಿಯಾದ ಮಂಗಳೂರು ಮೂಲದ ಬ್ಯಾಂಕ್ ಶಾಖಾಧಿಕಾರಿ

ಮಾನ್ಯ ವಲಸೆರಾಮಯ್ಯ ಅವರೇ, ಯಾವುದು ಹಿತವು ನಿಮಗೆ? ಪಟ್ಟ ಶಿಷ್ಯ ಜಮೀರನ ಜಹಾಗೀರ್ ಚಾಮರಾಜಪೇಟೆಯೊ? ಈಗಿನ ಕ್ಷೇತ್ರ ಬದಾಮಿಯೋ? ಇಲ್ಲ 2018 ಚುನಾವಣೆಯೇ ನಿಮ್ಮ ಕೊನೆಯ ಚುನಾವಣೆ ಅಂದುಕೊಳ್ಳುವುದೋ? ವಲಸೆ ನಾಯಕ ಸಿದ್ದರಾಮಯ್ಯ ಅವರೇ, ಉತ್ತರಿಸುವಿರಾ ಎಂದು ಬಿಜೆಪಿ ಪ್ರಶ್ನಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next