Advertisement

BJP;ಯಾರನ್ನು ಸೋಲಿಸಲು ಯತ್ನಿಸಿದ್ದಾರೆ ಗೊತ್ತಿದೆ: ನಿರಾಣಿ ವಿರುದ್ದ ಯತ್ನಾಳ್ ಕಿಡಿ

04:43 PM Jun 25, 2023 | Team Udayavani |

ಬೆಳಗಾವಿ: ವಿಜಯಪುರದಲ್ಲಿ ನನ್ನ ಚುನಾವಣೆ ಅಷ್ಟು ಸುಲಭ ಇರಲಿಲ್ಲ.ನನ್ನನ್ನ ಸೋಲಿಸಲು ಬಂದುವರು ಸೋತರು ಎಂದು ಪರೋಕ್ಷವಾಗಿ ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭಾನುವಾರ ಹೇಳಿಕೆ‌ ನೀಡಿದ್ದಾರೆ. ಒಂದೇ ವೇದಿಕೆಯಲ್ಲಿದ್ದಾಗಲೇ ನಿರಾಣಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

Advertisement

ಬೆಳಗಾವಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಕೇಂದ್ರ ಸಚಿವ ಯತ್ನಾಳ್, ವಿಧಾನಸಭೆ ಚುನಾವಣೆಯಲ್ಲಿ ಎನಾಗಿದೆ ಎಲ್ಲರಿಗೂ ಗೊತ್ತು.ಯಾರು ಯಾರನ್ನ ಸೋಲಿಸಲು ಯತ್ನಿಸಿದ್ದಾರೆ ಅಂತಾ ಕಾರ್ಯಕರ್ತರಿಗೆ ಗೊತ್ತಿದೆ. ಕಾರ್ಯಕರ್ತರ ಭಾವನೆಯನ್ನ ಕೇಳದಿದ್ರೇ ಇದೇ ಗತಿ ಆಗೋದು.ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ತಾಸು ಕುಳಿತು ಸಭೆ ಮಾಡಿ ಎಂದು ಸಲಹೆ ನೀಡಿದರು.

ಹಿಂದೂ ಧ್ವನಿಯನ್ನ ಕುಗ್ಗಿಸುವ ಹುನ್ನಾರ ರಾಜ್ಯದಲ್ಲಿ ನಡೆಯುತ್ತಿದೆ. ಸಿಟಿ ರವಿಯವರನ್ನ ಸೋಲಿಸಿದರು, ಬಿ.ಎಲ್. ಸಂತೋಷ್ ಅವರ ಬಗ್ಗೆ ಅಪಪ್ರಚಾರ ಮಾಡಿದರು.ದೇಶ ಉಳಿಯಬೇಕು, ಹಿಂದುಗಳು ಸುರಕ್ಷಿತವಾಗಿ ಇರಬೇಕು ಅಂದರೆ ಬಿಜೆಪಿ ಅಧಿಕಾರಕ್ಕೆ ಬರಬೇಕು.ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆಯಲ್ಲಿ 28ಸ್ಥಾನ ಗೆದ್ದು ಗೌರವ ಕೊಡಬೇಕಿದೆ. ಕ್ಷೇತ್ರಕ್ಕೆ ಹೋಗದೇ ಗೆದ್ದಿದ್ದು ನಾನು ಮತ್ತು ಬೊಮ್ಮಾಯಿಯವರು.ಸೋತಿದ್ದೇವೆ ಅಂತಾ ಮನೆಯಲ್ಲಿ ಕುಳಿತುಕೊಂಡರೆ ಆಗಲ್ಲಾ.ನಾವೆಲ್ಲರೂ ಕೂಡಿ ಇವತ್ತಿನಿಂದ ಕೆಲಸ ಮಾಡಿ ಬಿಜೆಪಿ ಅಧಿಕಾರಕ್ಕೆ ತರಬೇಕು ಎಂದರು.

ಪಾಟ್ನಾದಲ್ಲಿ ಮೊನ್ನೆ ಕಳ್ಳರು, ಲಫಂಗರು, ಬದ್ಮಾಶರು ಕೂಡಿದರು. ಪಾಕಿಸ್ತಾನ ದಿವಾಳಿ ಆದಂತೆ ಮಾಡಲು ಹೋರಟ್ಟಿದ್ದಾರೆ ಅವರು.ಭಾರತ ಪಾಕಿಸ್ತಾನ ಆಗಬೇಕಾ? ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಐದನೇ ಆರ್ಥಿಕ ರಾಷ್ಟ್ರವಾಗಿದೆ.ನಮ್ಮಲ್ಲಿಯ ಕೆಲವು ಅತೃಪ್ತ ಆತ್ಮಗಳು ಅವರನ್ನ ಕೆಡವುತ್ತೇವೆ ಎಂದು ಓಡಾಡಿದರು ಎಂದು ಕಟು ನುಡಿಗಳಲ್ಲಿ ವಿಪಕ್ಷಗಳ ವಿರುದ್ಧ ಕಿಡಿ ಕಾರಿದರು.

ಗ್ಯಾರಂಟಿ ಎಲ್ಲವೂ ಮುಗಿತು ಇವರಿಗೆ ಗ್ಯಾರಂಟಿ ಕೊಡೊಕೆ ಸಾಧ್ಯವಿಲ್ಲ.ಈಗ ಹೇಗೆ ಒದ್ದಾಡುತ್ತಿದ್ದಾರೆ ಎಲ್ಲರೂ.ಯಾವ ಸರ್ಕಾರ ಬಂದರೂ ಇದು ಮಾಡಲು ಆಗುವುದಿಲ್ಲ.ಹಾಗಿದ್ದಿದ್ರೇ ಬೊಮ್ಮಾಯಿ ಅವರು ಕೊಡುತ್ತಿದ್ದರು. ಒಂದು ರೀತಿ ಕರ್ನಾಟಕದಲ್ಲಿ ಅರಾಜಕತೆ ಶುರುವಾಗಿದೆ. ಪಾಕಿಸ್ತಾನದ ಧ್ವಜ ಹಾರಾಡುತ್ತಿವೆ, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಆಗುತ್ತಿವೆ‌.ನಾವು ಎಲ್ಲದಕ್ಕೂ ತಯಾರಾಗಬೇಕು ಇಲ್ಲವಾದರೆ ಮನೆಗೆ ಬಂದು ಹೊಡೆಯುತ್ತಾರೆ ಎಂದರು.

Advertisement

ಸಿದ್ದರಾಮಯ್ಯ, ಡಿಕೆಶಿ ಇಬ್ಬರ ನೇತೃತ್ವದ ಸರ್ಕಾರ ಐದು ವರ್ಷ ಹೋಗುವುದಿಲ್ಲ.ಇದು ಐದು ವರ್ಷ ನಡೆಯುವ ಸರ್ಕಾರ ಅಲ್ಲ. ಲೋಕಸಭಾ ಚುನಾವಣೆ ಮುನ್ನ, ಇಲ್ಲಾ ಆದ ಬಳಿಕ ಆ್ಯಕ್ಸಿಡೆಂಟ್ ಆಗುತ್ತೆ. ಅಷ್ಟರಲ್ಲಿ ಇಬ್ಬರು ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ತಾರೆ ಎಂದರು.

ಯಡಿಯೂರಪ್ಪ, ಬೊಮ್ಮಾಯಿ ಮನೆಗೆ ಸೌಜನ್ಯ ಭೇಟಿ ಅಂತಾರೆ. ಇವರು ಸೌಜನ್ಯ ಭೇಟಿ ಕೊಡ್ತಿಲ್ಲ ಸೋನಿಯಾ ಗಾಂಧಿಗೆ ಅಂಜಿಸುವ ಕೆಲಸ ಮಾಡ್ತಾರೆ.ಬೊಮ್ಮಾಯಿಯವರೇ ಅವರನ್ನ ನೀವು ಮನೆ ವರೆಗೂ ಬಿಟ್ಟುಕೊಳ್ಳಬೇಡಿ.ನಾವು ವಿರೋಧ ಪಕ್ಷದವರ ಮನೆಗೆ ಹೋಗುವುದಿಲ್ಲ ಅಂತಾರೆ‌.ಅದೇ ರೀತಿ ನಾವು ಅವರ ಮನೆಗೆ ಹೋಗುವುದಿಲ್ಲಾ ಅಂತಾ ಹೇಳಿ.ಅವರನ್ನ ಸ್ವಾಗತಿಸಿಕೊಂಡರೆ ನಮ್ಮ ಕಾರ್ಯಕರ್ತರು ಮಲಗಿ ಬಿಡುತ್ತಾರೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಹಲಕಟಗಿರಿ ಮಾಡೊದಿದ್ರೇ ಅಲ್ಲಿಗೆ ಹೋಗಿ ಎಂದು ಕಿಡಿ ಕಾರಿದರು.

ನಾವು ಯಾರು ಜಗಳ ಮಾಡುತ್ತಿಲ್ಲ, ಪಾರ್ಟಿ ನಿರ್ಣಯ ಮಾಡಿದವರ ಪರ ಕೆಲಸ ಮಾಡಿ.ಮೂರು ತಿಂಗಳಲ್ಲಿ ಗ್ಯಾರಂಟಿ ಬಣ್ಣ ಬಯಲು ಆಗಲಿದೆ. ಸಿದ್ದರಾಮಯ್ಯನವರು ಎನ್ ಹೇಳಿದರು ಅದನ್ನ ಹೊರ ತೆಗೆಯುತ್ತೇವೆ. ನಾವು ಗಟ್ಟಿ ಇದ್ದೇವೆ, ದನ ಕಾಯುತ್ತಿಲ್ಲ, ಆರ್ಥಿಕತೆ ಬಗ್ಗೆಯೂ ಗೊತ್ತಿದೆ ಎಂದರು.

ದೇಶದಲ್ಲಿ ಸಮಾನ ನಾಗರಿಕ ಕಾಯ್ದೆ ಜಾರಿಯಾಗಲಿದೆ.ಪಕ್ಷ ನಿರ್ಣಯ ಮಾಡಿದವರು ವಿರೋಧ ಪಕ್ಷದ ನಾಯಕರಾಗಲಿದ್ದಾರೆ.ನಮ್ಮಲ್ಲಿ ಯಾವುದೇ ಒಳ ಪೈಪೋಟಿ ಇಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next