Advertisement

ನನ್ನನ್ನು ಇನ್ನೂ ಪಕ್ಷದಿಂದ ಏಕೆ ಉಚ್ಛಾಟಿಸಿಲ್ಲ ಎಂದು ಗೊತ್ತಾಗುತ್ತಿಲ್ಲ: ಈಶ್ವರಪ್ಪ

10:11 PM Apr 11, 2024 | Team Udayavani |

ಶಿವಮೊಗ್ಗ: ಬಿಜೆಪಿ ವರಿಷ್ಠರ ಜತೆ ನನ್ನ ಮಾತುಕತೆ ಮುಗಿದ ಅಧ್ಯಾಯವಾಗಿದ್ದು, ಇನ್ನೂ ಪಕ್ಷದಿಂದ ಏಕೆ ಉಚ್ಚಾಟಿಸಿಲ್ಲ ಎಂಬುದು ನನಗೆ ಗೊತ್ತಾಗುತ್ತಿಲ್ಲ.

Advertisement

ಉಚ್ಚಾಟಿಸಿದರೆ ಅಪ್ಪ ಮಕ್ಕಳ ವಿರುದ್ಧ ಇನ್ನಷ್ಟು ಕಟುವಾಗಿ ಮಾತನಾಡಲು ಸಾಧ್ಯ ಎಂದು ಬಿಜೆಪಿ ಬಂಡಾಯ ನಾಯಕ ಕೆ.ಎಸ್‌.ಈಶ್ವರಪ್ಪ ತಿಳಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಪಕ್ಷದೊಳಗಿರುವ ಇನ್ನೂ ಅನೇಕ ನಾಯಕರಿಗೆ ತೀವ್ರ ಅಸಮಾಧಾನ ಇದೆ. ಕಾಲ ಕಾಲಕ್ಕೆ ಅದನ್ನು ಹೊರ ಹಾಕಿದ್ದಾರೆ. ಬಿಜೆಪಿ ಶುದ್ಧೀಕರಣವಾಗಬೇಕೆಂದು ನಾನು ಬಯಸಿ ಹೊರಬಂದು ಹೋರಾಡುತ್ತಿದ್ದರೆ, ಸಿ.ಟಿ.ರವಿ ಒಳಗಿದ್ದು ಹೋರಾಡುತ್ತಿದ್ದಾರೆ. ಸಿ.ಟಿ.ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ನಾನು ಹೇಳಿಲ್ಲ, ಅವಕಾಶ ಕೊಟ್ಟಿಲ್ಲ ಎಂದು ಹೇಳಿದ್ದೇನೆ. ಸಿ.ಟಿ.ರವಿ, ಪ್ರತಾಪ್‌ ಸಿಂಹ, ಸದಾನಂದಗೌಡ, ಕಟೀಲ್‌ಗೆ ಅವಕಾಶ ತಪ್ಪಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next