Advertisement

ಬಿಜೆಪಿಯವರು ಸುಳ್ಳಿನ ಫ್ಯಾಕ್ಟರಿ ಆರಂಭಿಸಿದ್ದಾರೆ: ಪ್ರಿಯಾಂಕಾ 

06:45 AM Jan 12, 2018 | Team Udayavani |

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಲು ಬಿಜೆಪಿಯವರಿಗೆ ಯಾವುದೇ ವಿಷಯ
ಇಲ್ಲದಿರುವುದರಿಂದ ಸುಳ್ಳಿನ ಫ್ಯಾಕ್ಟರಿ ಆರಂಭಿಸಿದ್ದಾರೆ ಎಂದು ಎಐಸಿಸಿ ಮಾಧ್ಯಮ ಸಂಯೋಜಕಿ ಪ್ರಿಯಾಂಕಾ
ಚತುರ್ವೇದಿ ಆರೋಪಿಸಿದ್ದಾರೆ.

Advertisement

ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಹೊಳಲ್ಕೆರೆ ಪರಿವರ್ತನಾ ಯಾತ್ರೆಯಲ್ಲಿ ಅಮಿತ್‌ ಶಾ ಜನತೆಗೆ ಕೇಳಿದ ಪ್ರಶ್ನೆಗೆ ಯಡಿಯೂರಪ್ಪ ಮುಂದಿನ ಮುಖ್ಯಮಂತ್ರಿ ಆಗುವುದು ಬೇಡ ಅಂತ ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕಾ ಎಂದು ಕೇಳಿದ ಪ್ರಶ್ನೆಗೂ ಜನರು ಬೇಡ ಅಂತ ಹೇಳಿದ್ದಾರೆ.ರಾಜ್ಯದ ಜನತೆ ನಮ್ಮ ಪರವಾಗಿದ್ದಾರೆ. ಕಾಂಗ್ರೆಸ್‌ಗೆ ಹೇಳಿಕೊಳ್ಳಲು ಸಾಕಷ್ಟು ವಿಷಯಗಳಿವೆ.

ಕರ್ನಾಟಕದ ಅಭಿವೃದ್ಧಿ ಮಾದರಿಯನ್ನು ಇಡೀ ದೇಶಕ್ಕೆ ತಿಳಿಸಲು ನಾವು ಪ್ರಯತ್ನ ನಡೆಸಿದ್ದೇವೆ ಎಂದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಗೆ ಆಡಳಿತ ನಡೆಸುತ್ತಿದ್ದಾರೆ ಎಂದು ಜನತೆಗೆ ಗೊತ್ತಿದೆ. ಅವರ ಅಜೆಂಡಾ ಏನು ಎನ್ನುವುದು ಎಲ್ಲರಿಗೂ ಗೊತ್ತಿದೆ. ಅವರಿಗೆ ಕರ್ನಾಟಕದಲ್ಲಿ ಜನರು ಉತ್ತರ ಕೊಡುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next