Advertisement

ತಿವಾರಿ ವಿರುದ್ಧ NRC ಹೇಳಿಕೆ; ದೆಹಲಿ ಸಿಎಂ ಕೇಜ್ರಿವಾಲ್ ಮನೆ ಮುಂದೆ ಭಾರೀ ಪ್ರತಿಭಟನೆ

09:34 AM Sep 27, 2019 | Team Udayavani |

ನವದೆಹಲಿ: ಬಿಜೆಪಿ ಮುಖಂಡ ಮನೋಜ್ ತಿವಾರಿ ವಿರುದ್ಧ ನೀಡಿದ್ದ ಹೇಳಿಕೆಯನ್ನು ವಿರೋಧಿಸಿ ಬಿಜೆಪಿಯ ಪೂರ್ವಾಂಚಲ್ ಮೋರ್ಚಾ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆ ಮುಂದೆ ಭಾರೀ ಪ್ರತಿಭಟನೆ ನಡೆಸಿದೆ.

Advertisement

ಅರವಿಂದ್ ಕೇಜ್ರಿವಾಲ್ ಮನೆ ಎದುರು ಪ್ರತಿಭಟನೆ ನಡೆಸಿದ ಬಿಜೆಪಿಯ ಪೂರ್ವಾಂಚಲ್ ಮೋರ್ಚಾದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಒಂದು ವೇಳೆ ದೆಹಲಿಯಲ್ಲಿ ಎನ್ ಆರ್ ಸಿ(ರಾಷ್ಟ್ರೀಯ ಪೌರತ್ವ ನೋಂದಣಿ) ಜಾರಿಯಾದರೆ ಬಿಜೆಪಿಯ ಮನೋಜ್ ತಿವಾರಿ ಮೊದಲಿಗೆ ದೆಹಲಿ ಬಿಡಬೇಕಾಗುತ್ತದೆ ಎಂದು ಕೇಜ್ರಿವಾಲ್ ಹೇಳಿಕೆ ನೀಡಿದ್ದರು.

ಬಿಜೆಪಿಯ ಪೂರ್ವಾಂಚಲ್ ಮೋರ್ಚಾದ ಕಾರ್ಯಕರ್ತರು ಬ್ಯಾರಿಕೇಡ್ ಹತ್ತಿ, ಬಿಜೆಪಿ ಬಾವುಟ ಪ್ರದರ್ಶಿಸಿ ಕೇಜ್ರಿವಾಲ್ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಜಲಫಿರಂಗಿ ಪ್ರಯೋಗಿಸಿರುವುದಾಗಿ ವರದಿ ತಿಳಿಸಿದೆ.

ಅಸ್ಸಾಂನಲ್ಲಿ ಎನ್ ಆರ್ ಸಿ ಜಾರಿಗೊಳಿಸಿದಂತೆ ದೆಹಲಿಯಲ್ಲಿಯೂ ಎನ್ ಆರ್ ಸಿ ಜಾರಿಯಾಗಬೇಕು ಎಂದು ಬಿಜೆಪಿ ದೆಹಲಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಹಲವಾರು ಬಾರಿ ಬೇಡಿಕೆ ಇಟ್ಟಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next