Advertisement

ಬಿಜೆಪಿ ಮುಖಂಡ ಭಾನುಪ್ರಕಾಶ್ ಪುತ್ರನಿದ್ದ ಕಾರಿನ ಮೇಲೆ ರಾಡ್‍ನಿಂದ ದಾಳಿ

11:41 PM May 06, 2022 | Team Udayavani |

ಶಿವಮೊಗ್ಗ: ಸೂಳೆಬೈಲು ಸಮೀಪದ ಇಂದಿರಾನಗರದಲ್ಲಿ ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಚಾಲಕ ಎಂ.ಬಿ.ಭಾನುಪ್ರಕಾಶ್ ಅವರ ಪುತ್ರ ಹರಿಕೃಷ್ಣ ಅವರಿದ್ದ ಕಾರಿನ ಮೇಲೆ ಶುಕ್ರವಾರ ರಾತ್ರಿ ಕಿಡಿಗೇಡಿಗಳು ರಾಡ್‍ನಿಂದ ದಾಳಿ ಮಾಡಿರುವ ಘಟನೆ ನಡೆದಿದೆ.

Advertisement

ಶಿವಮೊಗ್ಗದಿಂದ ಮತ್ತೂರಿಗೆ ಹೋಗುತ್ತಿದ್ದಾಗ ಏಕಾಏಕಿ ಬೈಕ್‍ನಲ್ಲಿ ಬಂದ ಮೂರ್ನಾಲ್ಕು ಜನ ಕಿಡಿಗೇಡಿಗಳು ಕಾರಿನ ಹಿಂಭಾಗ ರಾಡ್‍ನಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ. ಕತ್ತಲಾಗಿದ್ದರಿಂದ ಯಾರು ದಾಳಿ ಮಾಡಿದ್ದಾರೆ, ಉದ್ದೇಶವೇನು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

 ಸ್ಥಳದಲ್ಲಿ ಸಂದಿಗ್ಧ ಸ್ಥಿತಿ, ಎಸ್‍ಪಿ ದೌಡು: ಘಟನೆಯ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಮತ್ತೂರು ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಇದರಿಂದಾಗಿ ಕೆಲಹೊತ್ತು ಸಂದಿಗ್ಧ ಸ್ಥಿತಿ ನಿರ್ಮಾಣವಾಗಿತ್ತು. ಎಸ್‍ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ಸೇರಿದಂತೆ ತುಂಗಾನಗರ, ದೊಡ್ಡಪೇಟೆ ಸೇರಿದಂತೆ ವಿವಿಧ ಠಾಣೆಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದರು. ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳುವ ಭರವಸೆ ನೀಡಿದ ಬಳಿಕ ಪರಿಸ್ಥಿತಿ ತಿಳಿಯಾಯಿತು. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next