Advertisement

ಎಚ್‌ಡಿಕೆ, ಸಿದ್ಧರಾಮಯ್ಯ ರಾಜೀನಾಮೆಗೆ ಬಿಜೆಪಿ ನಾಯಕ ಆರ್‌ ಅಶೋಕ್‌ ಆಗ್ರಹ

09:21 AM May 26, 2019 | Team Udayavani |

ಬೆಂಗಳೂರು : ಇದೀಗ ಮುಗಿದಿರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿನ ಕಾಂಗ್ರೆಸ್‌ – ಜೆಡಿಎಸ್‌ ಆಳುವ ಮೈತ್ರಿ ಕೂಟ ಧೂಳೀಪಟವಾಗಿರುವುದರಿಂದ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಮತ್ತು ರಾಜ್ಯ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಬೇಕು ಎಂದು ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಡಿಸಿಎಂ ಆರ್‌ ಅಶೋಕ್‌ ಇಂದು ಶನಿವಾರ ಆಗ್ರಹಿಸಿದ್ದಾರೆ.

Advertisement

ರಾಜ್ಯದ 28 ಲೋಕಸಭಾ ಸೀಟುಗಳ ಪೈಕಿ 25 ಸೀಟುಗಳಿಗೆ ಮತದಾರರು ಬಿಜೆಪಿಯನ್ನು ಚುನಾಯಿಸಿದ್ದಾರೆ. ಎಂದರೆ ರಾಜ್ಯದ 224 ಸೀಟುಗಳ ಪೈಕಿ 177ಕ್ಕೂ ಹೆಚ್ಚಿನ ವಿಧಾನಸಭಾ ಸ್ಥಾನಗಳಿಗೆ ಜನರು ಬಿಜೆಪಿಯನ್ನು ಆಯ್ಕೆ ಮಾಡಿದಂತಾಗಿದೆ. ಆದುದರಿಂದ ಮುಖ್ಯಮಂತ್ರಿ ಕುಮಾರಸ್ವಾಮಿ, ಸಿಎಲ್‌ಪಿ ನಾಯಕ ಸಿದ್ಧರಾಮಯ್ಯ ಅವರು ಈ ಕೂಡಲೇ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿ ಕೆಳಗಿಳಿಯಬೇಕು ಎಂದವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next