Advertisement

ಲಾಠಿಚಾರ್ಜ್ ವೇಳೆ ಬಿಜೆಪಿ ಮುಖಂಡ ಮೃತ್ಯು ; ನಡ್ಡಾ, ಸುಶೀಲ್ ಮೋದಿ ಆಕ್ರೋಶ

05:04 PM Jul 13, 2023 | Team Udayavani |

ಪಾಟ್ನಾ: ರಾಜ್ಯದಲ್ಲಿ ಶಿಕ್ಷಕರ ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ಬಿಹಾರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರಿಂದ ಬಿಜೆಪಿ ಮುಖಂಡ ಮೃತಪಟ್ಟಿದ್ದಾರೆ.

Advertisement

ವರದಿಗಳ ಪ್ರಕಾರ, ಮೃತ ಬಿಜೆಪಿ ಮುಖಂಡ ವಿಜಯ್ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದ್ದು, ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ನಗರದ ದಕ್ಬಂಗ್ಲಾ ಚೌರಾಹಾದಲ್ಲಿ ಸಾವನ್ನಪ್ಪಿದ್ದಾರೆ.ಸಿಂಗ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು.

ಈ ಮಾಹಿತಿಯನ್ನು ಬಿಜೆಪಿ ಹಿರಿಯ ನಾಯಕ ರಾಜ್ಯಸಭಾ ಸಂಸದ ಸುಶೀಲ್ ಮೋದಿ ದೃಢಪಡಿಸಿದ್ದು,”ಪಾಟ್ನಾದಲ್ಲಿ ಬಿಹಾರ ಪೊಲೀಸರು ಬಂಧಿಸಿದ ಜೆಹಾನಾಬಾದ್ ಜಿಲ್ಲೆಯ ಜಿ.ಎಸ್. ವಿಜಯ್ ಕುಮಾರ್ ಸಿಂಗ್ ಕ್ರೂರ ಪೊಲೀಸ್ ಲಾಠಿ ಚಾರ್ಜ್‌ನಲ್ಲಿ ಸಾವನ್ನಪ್ಪಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

‘ವಿಧಾನಸಭಾ ಮಾರ್ಚ್’ ನಡೆಸುತ್ತಿದ್ದ ವೇಳೆ ಬಿಜೆಪಿ ಮುಖಂಡರ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ.ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಮತ್ತು ಅಶ್ರುವಾಯು ಪ್ರಯೋಗಿಸಿದ್ದಾರೆ.

ನಡ್ಡಾ ಆಕ್ರೋಶ

Advertisement

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಆಕ್ರೋಶ ಹೊರ ಹಾಕಿದ್ದು,”ಪಾಟ್ನಾದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ರಾಜ್ಯ ಸರಕಾರದ ವೈಫಲ್ಯ ಮತ್ತು ಆಕ್ರೋಶದ ಪರಿಣಾಮವಾಗಿದೆ. ಮಹಾಮೈತ್ರಿಕೂಟ ಸರಕಾರ ಭ್ರಷ್ಟಾಚಾರದ ಕೋಟೆಯನ್ನು ಉಳಿಸಲು ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿದೆ.ಆರೋಪ ಪಟ್ಟಿಗೆ ಒಳಗಾದ ವ್ಯಕ್ತಿಯನ್ನು ಉಳಿಸಲು ಬಿಹಾರದ ಮುಖ್ಯಮಂತ್ರಿ ನೈತಿಕತೆಯನ್ನೂ ಮರೆತಿದ್ದಾರೆ.” ಎಂದು ಟ್ವೀಟ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next