Advertisement

ಮತ್ತೆ ಯಾಕೆ ಅದೇ ತಪ್ಪು ಮಾಡುತ್ತಿದ್ದೀರಿ: ಬಿಎಸ್ ವೈ ಬೆಂಬಲಕ್ಕೆ ನಿಂತ ಸುಬ್ರಮಣ್ಯನ್ ಸ್ವಾಮಿ

04:37 PM Jul 21, 2021 | Team Udayavani |

ಬೆಂಗಳೂರು: ರಾಜ್ಯದ ನಾಯಕತ್ವ ಬದಲಾವಣೆ ವದಂತಿ ವಿಚಾರ ಸದ್ಯ ರಾಷ್ಟ್ರ ಮಟ್ಟದ ಚರ್ಚೆಯ ವಿಷಯವಾಗಿದೆ. ಅನೇಕ ರಾಷ್ಟ್ರೀಯ ನಾಯಕರೂ ಕೂಡಾ ರಾಜ್ಯದ ಬೆಳವಣಿಗೆಯ ಬಗ್ಗೆ ಕಣ್ಣಿಟ್ಟಿದ್ದಾರೆ. ಇದೀಗ ಬಿಜೆಪಿ ಹಿರಿಯ ನಾಯಕ ಸುಬ್ರಮಣ್ಯನ್ ಸ್ವಾಮಿ ಇದೇ ವಿಚಾರವಾಗಿ ಟ್ವೀಟ್ ಮಾಡಿದ್ದು, ಸಿಎಂ ಯಡಿಯೂರಪ್ಪ ಪರ ಬ್ಯಾಟ್ ಬೀಸಿದ್ದಾರೆ.

Advertisement

ಕರ್ನಾಟಕದಲ್ಲಿ ಬಿಜೆಪಿಯನ್ನು ಮೊದಲು ಅಧಿಕಾರಕ್ಕೆ ತಂದವರೇ ಯಡಿಯೂರಪ್ಪ. ಅವರು ಚಮ್ಚಾ ಆಗದ ಕಾರಣ ಕೆಲವರು ಅವರನ್ನು ಅಧಿಕಾರದಿಂದ ತೆಗೆದುಹಾಕಲು ಸಂಚು ಹೂಡುತ್ತಿದ್ದಾರೆ. ಅವರಿಲ್ಲದಾಗ ಬಿಜೆಪಿಗೆ ರಾಜ್ಯದಲ್ಲಿ ಅಧಿಕಾರ ಮರಳಿ ಪಡೆಯಲು ಸಾಧ್ಯವಾಗಲಿಲ್ಲ. ಅವರು ಬಿಜೆಪಿಗೆ ಮರಳಿದ ನಂತರವೇ ಮತ್ತೆ ಗೆಲ್ಲಲು ಸಾಧ್ಯವಾಯಿತು. ಈಗ ಅದೇ ತಪ್ಪನ್ನು ಏಕೆ ಪುನರಾವರ್ತಿಸಬೇಕು ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ರಾಜೀನಾಮೆ ಬಗ್ಗೆ ಯಡಿಯೂರಪ್ಪ ಏನು ಹೇಳಿಲ್ಲ: ಸಿಎಂ ಭೇಟಿಯ ಬಳಿಕ ಸಿದ್ದಗಂಗಾ ಶ್ರೀ

ನಾಯಕತ್ವ ಬದಲಾವಣೆ ವದಂತಿ ಹೆಚ್ಚಾಗುತ್ತಿದ್ದಂತೆ ವಿವಿಧ ಮಠಾಧೀಶರು ಸಿಎಂ ಭೇಟಿಯಾಗುತ್ತಿದ್ದಾರೆ. ಈ ಸಮಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಬಾರದು, ಮುಂದಿನ ಎರಡು ವರ್ಷ ಯಡಿಯೂರಪ್ಪ ಅವರನ್ನೇ ಮುಂದುವರಿಸಬೇಕು ಎಂದು ಮಠಾಧೀಶರು ಆಗ್ರಹಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next