Advertisement

BJP Leader: ಯತ್ನಾಳ್‌ 1,200 ಕೋಟಿ ಹೇಳಿಕೆ ವರಿಷ್ಠರ ಗಮನಕ್ಕೆ: ಶಾಸಕ ಸುನಿಲ್‌

01:47 AM Oct 01, 2024 | Team Udayavani |

ಬೆಂಗಳೂರು: ಸರಕಾರ ರಚಿಸುವುದು ಶಾಸಕರ ಬಲದ ಮೇಲೆಯೇ ವಿನಾ ಹಣದಿಂದಲ್ಲ. ಬಿಜೆಪಿ ಇದುವರೆಗೆ ಶಾಸಕರ ಬಲದಿಂದ ಮಾತ್ರ ಸರಕಾರ ರಚಿಸಿದೆ ಎಂದು ಮಾಜಿ ಸಚಿವ, ಶಾಸಕ ವಿ. ಸುನಿಲ್‌ ಕುಮಾರ್‌ ಹೇಳಿದ್ದಾರೆ.

Advertisement

ಸಿಎಂ ಆಗಲು 1,200 ಕೋಟಿ ಇಟ್ಟುಕೊಂಡಿದ್ದಾರೆ. ಸರಕಾರ ಉರುಳಿಸಲು ಪ್ರಯತ್ನ ನಡೆದಿದೆ ಎಂಬ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಇದನ್ನು ಯಾವುದೇ ಕಾರಣಕ್ಕೂ ಪಕ್ಷ ಒಪ್ಪಲು ತಯಾರಿಲ್ಲ. ಅದು ಅವರ ವೈಯಕ್ತಿಕ ಹೇಳಿಕೆ. ಇದನ್ನು ಪಕ್ಷದ ವರಿಷ್ಠರು ಖಂಡಿತವಾಗಿ ಗಮನಿಸುತ್ತಾರೆ. ಯಾವ ಹಿನ್ನೆಲೆಯಲ್ಲಿ ಇದನ್ನು ಹೇಳದ್ದಾರೆ ಎಂಬ ವರದಿ ತರಿಸಿಕೊಂಡು ಮುಂದಿನ ದಿನಗಳಲ್ಲಿ ಉತ್ತರ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು.

40 ಲಕ್ಷ ಸದಸ್ಯತ್ವ:
ಮೊದಲ ಹಂತದ ಸದಸ್ಯತ್ವ ಅಭಿಯಾನದಲ್ಲಿ 40 ಲಕ್ಷ ಸದಸ್ಯತ್ವದ ಗುರಿ ಮುಟ್ಟಿದ್ದೇವೆ. ನಾಳೆಯಿಂದ ಎರಡನೇ ಹಂತದ ಅಭಿಯಾನಕ್ಕೆ ಚಾಲನೆ ಲಭಿಸಲಿದ್ದು ಮುಂದಿನ 15 ದಿನಗಳಲ್ಲಿ ಸಾರ್ವಜನಿಕವಾಗಿ ದೊಡ್ಡ ಪ್ರಮಾಣದಲ್ಲಿ ಅಭಿಯಾನ ಮಾಡುತ್ತೇವೆ. ಅ. 3ರಂದು ಕರ್ನಾಟಕದಲ್ಲಿ ಸದಸ್ಯತ್ವ ಅಭಿಯಾನದ ಪರಿಶೀಲನೆ ಸಭೆ ನಡೆಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next