Advertisement

ಗೂಂಡಾ ಪರವಾಗಿ ಸದನದಲ್ಲಿ ಬಿಜೆಪಿ ನಾಯಕರು ಚರ್ಚೆ ಮಾಡುತ್ತಿದ್ದಾರೆ: ಆಯನೂರು ಮಂಜುನಾಥ್

01:14 PM Dec 14, 2023 | keerthan |

ಶಿವಮೊಗ್ಗ: ಭದ್ರವಾವತಿಯಲ್ಲಿ ಬಿಜೆಪಿ ಕಾರ್ಯಕರ್ತ ಗೋಕುಲ್ ಗೋಕುಲ್ ಕಾಂಗ್ರೆಸ್ ಮುಖಂಡರ ಮೇಲೆ ಗುಂಡಾಗಿರಿ ಮಾಡುತ್ತಿದ್ದ. ಅವನಿಂದ ನಮ್ಮ ಕಾಂಗ್ರೆಸ್ ಕಾರ್ಯಕರ್ತರನ್ನು ರಕ್ಷಣೆ ಮಾಡಬೇಕಿದೆ. ಕಾಂಗ್ರೆಸ್ ಮುಖಂಡರಿಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದಾನೆ. ಗೋಕುಲ್ ಮೇಲೆ ಅಪ್ರಕರಣ ದಾಖಲಿಸುವಂತೆ ಪೌರ ಕಾರ್ಮಿಕರು ಆಗ್ರಹ ಮಾಡಿದ್ದಾರೆ. ಅಂತಹ ಗೂಂಡಾ ಪರವಾಗಿ ಸದನದಲ್ಲಿ ಬಿಜೆಪಿ ನಾಯಕರು ಚರ್ಚೆ ಮಾಡುತ್ತಿದ್ದಾರೆ. ನಿಯಂತ್ರಿಸುವ ಬದಲಿಗೆ ಬಿಜೆಪಿಯವರು ಅವನನ್ನು ಬೆಂಬಲಿಸುತ್ತಿದ್ದಾರೆ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭದ್ರಾವತಿ ಘಟನೆಯನ್ನು ಬಿಜೆಪಿಯ ನಾಯಕರು ಸದನದಲ್ಲಿ ಪ್ರಸ್ತಾಪ ಮಾಡುತ್ತಿದ್ದಾರೆ. ಭದ್ರಾವತಿಯಲ್ಲಿ ಗೂಂಡಾಗಿರಿ ನಡಿದಿದೆ ಎಂದು ಸದನದಲ್ಲಿ ಸಂಗಮೇಶ್ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಗೋಕುಲ್ ಮೇಲೆ ಯಾರು ಹಲ್ಲೆ ಮಾಡಿದ್ದಾರೆ ಎನ್ನುವುದನ್ನು ಪೊಲೀಸರು ತನಿಖೆ ಮಾಡಿ ಹೇಳಬೇಕು ಎಂದರು.

ಶಾಸಕ ಸಂಗಮೇಶ್ ಹಾಗೂ ಅವರ ಮಗನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಈ ಘಟನೆಗೂ ಸಂಗೇಮೇಶ್ ಗೂ ಸಂಬಂಧವಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ಸಂಗಮೇಶ್ ಮೇಲೆ ಗೂಂಡಾಗಿರಿ ಮಾಡಿದ್ದರು. ಸಂಗಮೇಶ್ ಅವರನ್ನು ಟಾರ್ಗೆಟ್ ಮಾಡುವ ಪ್ರವೃತ್ತಿ ನಡೆಯುತ್ತಿದೆ‌ ಎಂದು ಆರೋಪಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಗೊಂದಲಗಳಾಗ ಬೇಕೆಂದು ಹೀಗೆ ಮಾಡುತ್ತಾರೆ. ಎಂಪಿಎಂ ಪ್ರಾರಂಭ ಮಾಡುವ ಕೆಲಸವನ್ನು ಶಾಸಕರು ಮಾಡುತ್ತಿದ್ದಾರೆ. ಶಿವಮೊಗ್ಗದಲ್ಲಿ ಗಲಾಟೆ ಮಾಡುವ ಪ್ರಯತ್ನಗಳು ವಿಫಲವಾದವು. ರಾಗಿಗುಡ್ಡದ ಪ್ರಕರಣ ಇಟ್ಟುಕೊಂಡು ಏನೇನೋ ಮಾಡಿದರು. ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ದೊಡ್ಡದು ಮಾಡುತ್ತಿದ್ದಾರೆ ಎಂದು ಆಯನೂರು ಹೇಳಿದರು.

ಗೋಕುಲ್ ಮಾತಾನಾಡಿರುವ ಆಡಿಯೋ ಪ್ರಸ್ತಾವನೆ ಮಾಡಿ ಬಿಜೆಪಿಯವರು ಮಾತಾಡಲಿ. ಪುಂಡಪೋಕರಿಗಳನ್ನು ಪೋಷಿಸಬಾರದು. ಬಿಜೆಪಿಯವರ ನಡೆಯನ್ನು ಕಾಂಗ್ರೆಸ್ ಖಂಡಿಸುತ್ತೇವೆ. ಶಾಸಕ ಸಂಗಮೇಶ್ ಮೇಲೆ ಮಾಡುವ ತೇಜೋವಧೆಯನ್ನು ನಿಲ್ಲಿಸಬೇಕು. ಸಂಗಮೇಶ್ ಅವರನ್ನು ಸೋಲಿಸಲಾಗದೆ ಹೀಗೆ ಆರೋಪ ಮಾಡುತ್ತಿದ್ದಾರೆ ಎಂದ ಆಯನೂರು ಮಂಜುನಾಥ್, ಬಿಜೆಪಿ ಕಾರ್ಯಕರ್ತ ಗೋಕುಲ್ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next