Advertisement
ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು, ನಮ್ಮ ಗಾಂಧೀಜಿಯನ್ನು ಕೊಲೆ ಮಾಡಿದಂತಹ ನಾಥೂರಾಮ್ ಗೋಡ್ಸೆ ಬಗ್ಗೆ ಕೆಲವರು ಮಾತನಾಡುತ್ತಿದ್ದಾರೆ. ಅಂಥವರು ಈ ದೇಶದಲ್ಲೇ ಇರಬಾರದು. ಅವರೇನಾದರೂ ಈ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಲು ಹೊರಟರೆ, ಬಹುಶಃ ನಿಮಗೆ ತಾಕತ್ತಿದ್ದರೆ ನಿಮ್ಮ ಮೋದಿಯ ವರನ್ನು ಗುಂಡು ಇಟ್ಟು ಸಾಯಿಸಿರಿ. ಈ ದೇಶದಲ್ಲಿ ಇನ್ಯಾರನ್ನೂ ಸಾಯಿಸಲು ಹೋಗಬೇಡಿ’ ಎಂದು ಹೇಳಿರುವ ವಿಡಿಯೋ ಶೇರ್ ಮಾಡಿರುವ ಬಿಜೆಪಿ ಕರ್ನಾಟಕ ತೀವ್ರವಾಗಿ ಖಂಡಿಸಿದೆ. ಬೇಳೂರು ಗೋಪಾಲಕೃಷ್ಣ ಅವರು ಪಕ್ಷದ ಅಧಿಕೃತ ಕಾರ್ಯಕ್ರಮದಲ್ಲಿ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿರುವ ಪ್ರಧಾನಿ ಮೋದಿಯವರನ್ನು ಹತ್ಯೆ ಮಾಡುವಂತೆ ಕರೆ ನೀಡುತ್ತಾರೆ. ಪ್ರಧಾನಿಯವರ ಹತ್ಯೆಗೆ ಪ್ರಚೋದಿಸುವುದು ರಾಷ್ಟ್ರದ ಭದ್ರತೆಗೆ ಬೆದರಿಕೆಯೊಡ್ಡಿದಂತಿದ್ದು, ಕೂಡಲೇ ಕೇಂದ್ರ ಗೃಹ ಸಚಿವಾಲಯ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಕರ್ನಾಟಕ ಟ್ವಿಟರ್ನಲ್ಲಿ ಆಗ್ರಹಿಸಿದೆ.
Related Articles
ಪ್ರಧಾನಿ ಮೋದಿಯವರನ್ನು ಹತ್ಯೆ ಮಾಡುವಂತೆ ಬೇಳೂರು ಗೋಪಾಲಕೃಷ್ಣ ನೀಡಿರುವ ಹೇಳಿಕೆಗೆ ಆಘಾತ ವ್ಯಕ್ತಪಡಿಸಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಲೆಹರ್ ಸಿಂಗ್, ಕೂಡಲೇ ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಕೋರಿ ಮುಖ್ಯಮಂತ್ರಿಗೆ ಮಂಗಳವಾರ ಪತ್ರ ಬರೆದಿದ್ದಾರೆ. ಈ ಹೇಳಿಕೆಯನ್ನು ಲಘುವಾಗಿ ಪರಿಗಣಿಸಬಾರದು. ಮುಖ್ಯಮಂತ್ರಿಗಳು ಸ್ವಯಂಪ್ರೇರಿತವಾಗಿ ತಕ್ಷಣವೇ ಬೇಳೂರು ಗೋಪಾಲಕೃಷ್ಣ ಅವರನ್ನು ವಿಚಾರಣೆ ನಡೆಸಿ ತನಿಖೆಗೊಳಪಡಿಸುವಂತೆ ಸೂಚಿಸಬೇಕು. ಪ್ರಧಾನಿಯವರು ಬುಧವಾರ ಕಲಬುರಗಿಗೆ ಭೇಟಿ ನೀಡುತ್ತಿದ್ದು, ಕಾಂಗ್ರೆಸ್ನ ನಾಯಕರ ಅಪಾಯಕಾರಿ ಹೇಳಿಕೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ಇನ್ನಷ್ಟು ಬಿಗಿ ಭದ್ರತಾ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
Advertisement
ದೂರು ಸಲ್ಲಿಕೆ ಇಂದುಪ್ರಧಾನಿ ವಿರುದಟಛಿ ಪ್ರಚೋದನಕಾರಿ ಭಾಷಣ ಮಾಡಿರುವ ಬೇಳೂರು ಗೋಪಾಲಕೃಷ್ಣ ವಿರುದ್ಧ
ಬಿಜೆಪಿ ಮುಖಂಡರ ನಿಯೋಗ ಬುಧವಾರ ಬೆಳಗ್ಗೆ 11.30ಕ್ಕೆ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಿದೆ.