Advertisement

BJP ನಾಯಕರ ದಿಲ್ಲಿ ಪ್ರವಾಸ: ಸದಸ್ಯತ್ವ ಅಭಿಯಾನ ಚರ್ಚೆ?

11:33 PM Sep 09, 2024 | Team Udayavani |

ಬೆಂಗಳೂರು: ಕಳೆದ ವಾರವಷ್ಟೇ ದಿಲ್ಲಿ ಪ್ರವಾಸ ನಡೆಸಿದ್ದ ಬಿಜೆಪಿ ನಾಯಕರು ಈಗ ಮತ್ತೆ ವರಿಷ್ಠರ ಭೇಟಿಗಾಗಿ ಮಂಗಳವಾರ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Advertisement

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್‌.ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ.ಮೋಹನ್‌ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್‌ ರೆಡ್ಡಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಬಿಜೆಪಿ ಮೂಲಗಳ ಪ್ರಕಾರ ಈ ಭೇಟಿ ಸದಸ್ಯತ್ವ ಅಭಿಯಾನ ಹಾಗೂ ಸಂಘಟನಾತ್ಮಕ ಚಟುವಟಿಕೆಗೆ ಸಂಬಂಧಪಟ್ಟಂತೆ ಇರಲಿದೆ. ಅನ್ಯ ರಾಜ್ಯಗಳ ಚುನಾವಣೆಯಲ್ಲಿ ವರಿಷ್ಠರು ಮುಳುಗಿರುವುದರಿಂದ ರಾಜ್ಯದ ವಿದ್ಯಮಾನಗಳ ಬಗ್ಗೆ ಯಾವುದೇ ಚರ್ಚೆ ನಡೆಸುವ ಸಾಧ್ಯತೆ ಇಲ್ಲ ಎಂದು ತಿಳಿದು ಬಂದಿದೆ.

ಯತ್ನಾಳ್‌ ದಿಲ್ಲಿಯಲ್ಲಿ
ಇದೆಲ್ಲದರ ಮಧ್ಯೆ ಬಿಜೆಪಿಯ ಹಿರಿಯ ಶಾಸಕ ಕಳೆದ 2 ದಿನಗಳಿಂದ ದಿಲ್ಲಿಯಲ್ಲೇ ಬೀಡು ಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಡಿ.ಕೆ.ಶಿವಕುಮಾರ್‌ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸುವುದಕ್ಕಾಗಿ ಅವರು ದಿಲ್ಲಿಗೆ ತೆರಳಿದ್ದಾರೆ. ಅವರು ಕೂಡಾ ವರಿಷ್ಠರನ್ನು ಭೇಟಿ ಮಾಡಿಲ್ಲ ಎಂದು ಹೇಳಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next