Advertisement

ಎಚ್‌ಡಿಕೆ ಆರೋಪಕ್ಕೆ ಬಿಜೆಪಿ ನಾಯಕರ ಅಸಮಾಧಾನ

10:16 PM Jan 25, 2020 | Lakshmi GovindaRaj |

ಬೆಂಗಳೂರು: ತಮ್ಮ ಕೊಲೆ ಬೆದರಿಕೆ ಹಿಂದೆ ಬಿಜೆಪಿ ಸಂಘಟನೆಗಳ ಕೈವಾಡವಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಕ್ಕೆ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ “ಕೃಷ್ಣಾ’ದಲ್ಲಿ ಶನಿವಾರ ಕುಮಾರಸ್ವಾಮಿಯವರ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾತನಾಡಿ, ಕುಮಾರಸ್ವಾಮಿಯವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡದಿರಲು ನಿರ್ಧರಿಸಿದ್ದೇನೆ ಎಂದಷ್ಟೇ ಹೇಳಿದರು.

Advertisement

ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಮಾಜಿ ಮುಖ್ಯಮಂತ್ರಿಗೆ ಯಾವ ಭದ್ರತೆ ನೀಡಬೇಕೋ ಅದನ್ನು ನೀಡಲಾಗಿದೆ. ಜೀವ ಬೆದರಿಕೆ ಬಗ್ಗೆ ಕುಮಾರಸ್ವಾಮಿಯವರು ವಿವರ ನೀಡಿದರೆ ತನಿಖೆ ನಡೆಸಲಾಗುವುದು. ಅವರ ರಕ್ಷಣೆಯೇ ನಮ್ಮ ಆದ್ಯತೆ. ಹೆಚ್ಚಿನ ರಕ್ಷಣೆಯನ್ನು ಸರ್ಕಾರ ಒದಗಿಸುತ್ತದೆ. ಕುಮಾರಸ್ವಾಮಿಯವರು ದಯಮಾಡಿ ವಿವರ ನೀಡಬೇಕು.

ಕುಮಾರಸ್ವಾಮಿಯವರ ಹೇಳಿಕೆಯನ್ನು ನಾವು ರಾಜಕೀಯವಾಗಿ ಪರಿಗಣಿಸದೆ ಗಂಭೀರವಾಗಿ ಪರಿಗಣಿಸಿದ್ದೇವೆ. ಅವರಿಗೆ ಸೂಕ್ತ ರಕ್ಷಣೆ ಕೊಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ಸಚಿವ ಜಗದೀಶ ಶೆಟ್ಟರ್‌ ಪ್ರತಿಕ್ರಿಯಿಸಿ, ಕೊಲೆ ಬೆದರಿಕೆ ಹಾಕಿದ್ದರೆ ಎಚ್‌.ಡಿ. ಕುಮಾರಸ್ವಾಮಿಯವರು ದೂರು ನೀಡಲಿ. ತನಿಖೆ ನಡೆಸೋಣ. ಅದನ್ನು ಬಿಟ್ಟು ಈ ರೀತಿಯ ಹೇಳಿಕೆ ನೀಡಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next