Advertisement

ಖೆಡ್ಡಾಕ್ಕೆ  ಬಿದ್ದ ಬಿಜೆಪಿ ನಾಯಕರು: ಎ.ಮಂಜು ವ್ಯಂಗ್ಯ

03:45 AM Feb 16, 2017 | Team Udayavani |

ಶಿವಮೊಗ್ಗ: ಹೈಕಮಾಂಡ್‌ಗೆ ಹಣ ಸಂದಾಯ ಮಾಡಿದ್ದಾರೆ ಎಂದು ಆರೋಪಿಸುವ ಮೂಲಕ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಹೋದ ಬಿಜೆಪಿ ನಾಯಕರು ಇದೀಗ ತಾವೇ ಖೆಡ್ಡಾಕ್ಕೆ ಬಿದ್ದಿದ್ದಾರೆ ಎಂದು ಪಶುಸಂಗೋಪನೆ ಖಾತೆ ಸಚಿವ ಎ. ಮಂಜು ವ್ಯಂಗ್ಯವಾಡಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಾಂಗ್ರೆಸ್‌ ಹೈಕಮಾಂಡ್‌ಗೆ ಹಣ ಸಂದಾಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಆಧಾರ ರಹಿತ ಆರೋಪ ಮಾಡಿದ್ದಾರೆ. ಕೇಂದ್ರ ಸಚಿವ ಅನಂತಕುಮಾರ್‌ ಹಾಗೂ ಯಡಿಯೂರಪ್ಪ ವೇದಿಕೆಯೊಂದರಲ್ಲಿ ಮಾತನಾಡಿರುವ ಸೀಡಿ ಇದೀಗ ಬಹಿರಂಗಗೊಂಡಿದ್ದು, ಬಿಜೆಪಿ ನಾಯಕರು ಆನೆ ಹಿಡಿಯಲು ಹೋಗಿ ತಾವೇ ಖೆಡ್ಡಾಕ್ಕೆ ಬಿದ್ದಿದ್ದಾರೆ ಎಂದು ಲೇವಡಿ ಮಾಡಿದರು. ರಾಜಕೀಯ ದುರುದ್ದೇಶ ಇಟ್ಟುಕೊಂಡು ಅವರು ಆರೋಪ ಮಾಡಿದ್ದು, ಸೀಡಿಯಲ್ಲಿನ ಸಂಗತಿಯೇ ಇದಕ್ಕೆ ಪುಷ್ಠಿ ನೀಡುವಂತಿದೆ. ರಾಜ್ಯದ ಜನತೆಯೇ ಅವರಿಗೆ ತಕ್ಕ ಪಾಠ ಕಲಿಸಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next