Advertisement
ಅನಗೋಳದ ಭಾಗ್ಯನಗರ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ನವಶಕ್ತಿ ಸಮಾವೇಶದಲ್ಲಿ ಬಿಜೆಪಿ ಮುಖಂಡರೇ ಒಬ್ಬರಿಗೊಬ್ಬರೂ ಹೊಡೆದಾಡಿಕೊಂಡು ಬೀದಿಗೆ ಬಂದಿದ್ದು, ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಬೂತ್ಮಟ್ಟದ ಸಭೆಯಲ್ಲಿ ಮಾಜಿ ಶಾಸಕ ಅಭಯ ಪಾಟೀಲ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು. ಸಭೆ ನಡೆಯುತ್ತಿದ್ದಂತೆ ಬಿಜೆಪಿ ಮುಖಂಡ ಹಾಗೂ ಟಿಕೆಟ್ ಆಕಾಂಕ್ಷಿ ಪಿ.ಡಿ. ಧೋತ್ರೆ ಸಭೆಗೆ ಬಂದಿದ್ದಾರೆ. ಆಗ ಸಭೆಗೆ ಏಕೆ ಬಂದಿದ್ದೀಯಾ ಎಂದು ಮಾಜಿ ಶಾಸಕರ ಬೆಂಬಲಿಗರು ಪ್ರಶ್ನಿಸಿದ್ದಾರೆ. ಆಗ ಧೋತ್ರೆ ಅವರು ಸಮಾವೇಶಕ್ಕೆ ಬರುವಂತೆ ಸಂದೇಶ ಬಂದಿದೆ. ಹೀಗಾಗಿ ಬಂದಿರುವುದಾಗಿ ತಿಳಿಸುತ್ತಿದ್ದಂತೆ ಮಾಜಿ ಶಾಸಕ ಅಭಯ ಪಾಟೀಲ್ ಹಾಗೂ ಧೋತ್ರೆ ನಡುವೆ ಮಾತಿನ ಚಕಮಕಿ ನಡೆದಿದೆ. ಮಧ್ಯೆ ಪ್ರವೇಶಿಸಿದ ಅಭಯ ಪಾಟೀಲ್ ಬೆಂಬಲಿಗರು ಹಾಗೂ ಧೋತ್ರೆ ನಡುವೆ ಗುದ್ದಾಟ ಆರಂಭವಾಗುತ್ತಿದ್ದಂತೆ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಆಗ ಧೋತ್ರೆ ಅವರಿಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಸುನೀಲ ಚೌಗಲೆ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
Related Articles
– ಅಭಯ ಪಾಟೀಲ, ಮಾಜಿ ಶಾಸಕ
Advertisement
ನೇಕಾರರ ಮುಖಂಡ ಧೋತ್ರೆ ಅವರ ಮೇಲೆ ಹಲ್ಲೆ ನಡೆಸಿರುವ ಮಾಜಿ ಶಾಸಕರ ಗೂಂಡಾವರ್ತನೆಯನ್ನು ನಾವು ಖಂಡಿಸುತ್ತೇವೆ. ಈ ಬಗ್ಗೆ ಗೃಹ ಸಚಿವರು ಹಾಗೂ ಐಜಿಪಿ ಗಮನಕ್ಕೆ ತಂದು ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಲಾಗುವುದು. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.– ಎಂ.ಡಿ. ಲಕ್ಷ್ಮೀನಾರಾಯಣ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ