Advertisement
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅನ್ವಯ ಕೇಂದ್ರ ಸರಕಾರ 6,000 ರೂ. ಹಾಗೂ ರಾಜ್ಯ ಸರಕಾರ 4,000 ರೂ. ಅನ್ನು ರೈತರ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತಿತ್ತು. ಬಿ.ಎಸ್. ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ತತ್ಕ್ಷಣ ಕೇಂದ್ರದ ಜತೆಗೆ ರಾಜ್ಯದ ಪಾಲು 4,000ರೂ. ನೀಡುವ ನಿರ್ಧಾರ ತೆಗೆದುಕೊಂಡಿದ್ದರು. ಆದರೆ ಈಗಿನ ರಾಜ್ಯ ಸರಕಾರ ಕಿಸಾನ್ ಸಮ್ಮಾನ್ ಯೋಜನೆಯ ಪಾಲು ನೀಡದೇ ಇರಲು ನಿರ್ಧರಿಸಿದೆ. ಈ ಬಗ್ಗೆ ರೈತರ ಗಮನ ಸೆಳೆಯಲು ಬಿಜೆಪಿ ನಿರ್ಧರಿಸಿದೆ.
ರಾಜ್ಯದಲ್ಲಿ ಮಳೆಯಿಂದ ಜನ-ಜಾನುವಾರುಗಳು ಸಾವನ್ನಪ್ಪಿದ್ದು, ಬೆಳೆ ಹಾನಿಯಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಸಂತ್ರಸ್ತರಿಗೆ ನೈತಿಕ ಸ್ಥೈರ್ಯ ತುಂಬುವುದಕ್ಕಾಗಿ ರಾಜ್ಯ ಪ್ರವಾಸ ನಡೆಸಲು ಬಿಜೆಪಿ ನಿರ್ಧರಿಸಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಎರಡು ತಂಡ ರಚಿಸಲಾಗಿದ್ದು, ಡಾ| ಅಶ್ವತ್ಥನಾರಾಯಣ, ಸುನಿಲ್ ಕುಮಾರ್, ಬಸನಗೌಡ ಪಾಟೀಲ್ ಯತ್ನಾಳ್, ಬಿ.ವೈ. ವಿಜಯೇಂದ್ರ ಸೇರಿ ಅನೇಕ ಮುಖಂಡರು ಈ ನಿಯೋಗದಲ್ಲಿ ಇರಲಿದ್ದಾರೆ.
Related Articles
Advertisement