Advertisement

ರಾಜ್ಯದಲ್ಲಿ ಜನಜಾಗೃತಿಗೆ BJP ನಾಯಕರ ಪ್ರವಾಸ

11:51 PM Jul 25, 2023 | Team Udayavani |

ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಲ್ಲಿ ರಾಜ್ಯದ ಪಾಲು ರದ್ದುಗೊಳಿಸಿರುವುದು ಸೇರಿ ಬಿಜೆಪಿ ಸರಕಾರದ ಅವಧಿಯ ಕಾರ್ಯಕ್ರಮಗಳಿಗೆ ತಿಲಾಂಜಲಿ ಇಡಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ವಿರುದ್ಧ ಜಾಗೃತಿ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ.

Advertisement

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಅನ್ವಯ ಕೇಂದ್ರ ಸರಕಾರ 6,000 ರೂ. ಹಾಗೂ ರಾಜ್ಯ ಸರಕಾರ 4,000 ರೂ. ಅನ್ನು ರೈತರ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತಿತ್ತು. ಬಿ.ಎಸ್‌. ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ತತ್‌ಕ್ಷಣ ಕೇಂದ್ರದ ಜತೆಗೆ ರಾಜ್ಯದ ಪಾಲು 4,000ರೂ. ನೀಡುವ ನಿರ್ಧಾರ ತೆಗೆದುಕೊಂಡಿದ್ದರು. ಆದರೆ ಈಗಿನ ರಾಜ್ಯ ಸರಕಾರ ಕಿಸಾನ್‌ ಸಮ್ಮಾನ್‌ ಯೋಜನೆಯ ಪಾಲು ನೀಡದೇ ಇರಲು ನಿರ್ಧರಿಸಿದೆ. ಈ ಬಗ್ಗೆ ರೈತರ ಗಮನ ಸೆಳೆಯಲು ಬಿಜೆಪಿ ನಿರ್ಧರಿಸಿದೆ.

ರೈತಭೂಸಿರಿ ಸೇರಿ ಹಿಂದಿನ ಸರಕಾರದ ಅವಧಿಯಲ್ಲಿ ಜಾರಿಗೆ ತಂದ 14 ಯೋಜನೆಗಳನ್ನು ಕೈ ಬಿಡಲು ನಿರ್ಧರಿಸಿದೆ. ಇದನ್ನು ವಿರೋಧಿಸಿ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದ್ದು, ಹೋರಾಟದ ಸ್ವರೂಪ ನಿರ್ಧರಿಸಲು ಶಾಸಕರ ಜತೆಗೆ ವೀಡಿಯೋ ಕಾನ್ಫರೆನ್ಸ್‌ ಸಭೆಯನ್ನು ಬುಧವಾರ ಆಯೋಜಿಸಲಾಗಿದೆ.

ನಾಯಕರ ತಂಡ ರಚನೆ
ರಾಜ್ಯದಲ್ಲಿ ಮಳೆಯಿಂದ ಜನ-ಜಾನುವಾರುಗಳು ಸಾವನ್ನಪ್ಪಿದ್ದು, ಬೆಳೆ ಹಾನಿಯಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಸಂತ್ರಸ್ತರಿಗೆ ನೈತಿಕ ಸ್ಥೈರ್ಯ ತುಂಬುವುದಕ್ಕಾಗಿ ರಾಜ್ಯ ಪ್ರವಾಸ ನಡೆಸಲು ಬಿಜೆಪಿ ನಿರ್ಧರಿಸಿದೆ. ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಎರಡು ತಂಡ ರಚಿಸಲಾಗಿದ್ದು, ಡಾ| ಅಶ್ವತ್ಥನಾರಾಯಣ, ಸುನಿಲ್‌ ಕುಮಾರ್‌, ಬಸನಗೌಡ ಪಾಟೀಲ್‌ ಯತ್ನಾಳ್‌, ಬಿ.ವೈ. ವಿಜಯೇಂದ್ರ ಸೇರಿ ಅನೇಕ ಮುಖಂಡರು ಈ ನಿಯೋಗದಲ್ಲಿ ಇರಲಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next