Advertisement

ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ವಿಪ್ ಜಾರಿಗೊಳಿಸಿದ ಜೆಡಿಎಸ್

11:19 AM Jun 07, 2022 | Team Udayavani |

ಬೆಂಗಳೂರು: ರಾಜ್ಯಸಭಾ ಚುನಾವಣಾ ಹಿನ್ನೆಲೆಯಲ್ಲಿ ತಂತ್ರಗಾರಿಕೆ ನಡೆಸುವುದಕ್ಕಾಗಿ ಬುಧವಾರ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಸಲು ಬಿಜೆಪಿ ಮುಂದಾಗಿದೆ.

Advertisement

ಬಿಜೆಪಿ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಸಿಎಂ ಬಸವರಾಜ್ ಬೊಮ್ಮಾಯಿ ಸಭೆ ಕರೆದಿದ್ದು, ಎಲ್ಲ ಶಾಸಕರು ಖುದ್ದು ಉಪಸ್ಥಿತರಿರುವಂತೆ ಸೂಚನೆ ನೀಡಿದ್ದಾರೆ.

ನಾಳೆ ಸಂಜೆ ಏಳು ಗಂಟೆಗೆ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಈ ಸಭೆ ನಡೆಯಲಿದೆ. ಹಲವು ತಿಂಗಳು ಬಳಿಕ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸುತ್ತಿದೆ.

ಇದನ್ನೂ ಓದಿ:ಭ್ರಷ್ಟಾಚಾರ ಪ್ರಕರಣದಲ್ಲಿ ಪಂಜಾಬ್ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಸಾಧು ಸಿಂಗ್ ಬಂಧನ

ಈ ಮಧ್ಯೆ ಜೆಡಿಎಸ್ ಕೂಡಾ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ತನ್ನೆಲ್ಲ ಶಾಸಕರಿಗೆ ವಿಪ್ ಜಾರಿಗೊಳಿಸಿದೆ. ಜೆಡಿಎಸ್ ಪಕ್ಷದ ಮುಖ್ಯ ಸಚೇತಕ ವೆಂಕಟರಾವ್ ನಾಡಗೌಡ ವಿಪ್ ಜಾರಿಗೊಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next