Advertisement

ಜನರ ಆಶೋತ್ತರಗಳಿಗೆ ತಕ್ಕಂತೆ ಬಿಜೆಪಿ ಪ್ರಣಾಳಿಕೆ: ಸುಧಾಕರ್‌

11:56 PM Feb 10, 2023 | Team Udayavani |

ಬೆಂಗಳೂರು: ಜನರ ಆಶೋತ್ತರಗಳಿಗೆ ತಕ್ಕಂತೆ ಬಿಜೆಪಿಯ ಪ್ರಣಾಳಿಕೆ ಸಿದ್ಧವಾಗುತ್ತದೆ. ವಿಪಕ್ಷಗಳ ರೀತಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುವುದಿಲ್ಲ ಎಂದು ಬಿಜೆಪಿ ಪ್ರಣಾಳಿಕೆ ಸಲಹಾ ಅಭಿಯಾನದ ಸಂಚಾಲಕ ಆರೋಗ್ಯ ಮತ್ತು ವೈದ್ಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್‌ ಹೇಳಿದರು.

Advertisement

ಸಮಿತಿಯ ಮೊದಲ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಪಕ್ಷದ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಎಲ್ಲ ಜಿಲ್ಲೆಗಳ 200ಕ್ಕೂ ಹೆಚ್ಚು ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಹಿಳೆ ಯರು, ಯುವಜನರು, ವೃದ್ಧರು ಸಹಿತ ಎಲ್ಲ ಜನವರ್ಗಗಳಿಗೆ ನೀಡಲಿ ರುವ ಕಾರ್ಯಕ್ರಮಗಳ ಕುರಿತು ನಿರ್ಧಾರವಾಗಲಿದೆ ಎಂದರು.

ಬೊಮ್ಮಾಯಿ ರೈತ ವಿದ್ಯಾನಿಧಿಯ ಭರವಸೆಯನ್ನು ನೀಡದೆಯೇ ಆ ಯೋಜನೆ ಜಾರಿ ಮಾಡಿ¨ªಾರೆ. ಭರ ವಸೆಗಳನ್ನು ಮೀರಿಯೂ ಬಿಜೆಪಿ ಯೋಜನೋ ನೀಡಲಿದೆ. ವಿಪಕ್ಷ ಗಳಂತೆ ನಮ್ಮದು ಜನರ ದಿಕ್ಕು ತಪ್ಪಿಸುವ ಪ್ರಣಾ ಳಿಕೆ ಆಗಿರದೆ, ಬದುಕನ್ನು ಕಟ್ಟಿಕೊಡು ವಂಥದ್ದು ಆಗಿರಲಿದೆ ಎಂದರು.

ಮುಸಲ್ಮಾನರನ್ನು ಸಿಎಂ ಮಾಡಲಿ: ಎಚ್‌ಡಿಕೆಗೆ ಸವಾಲು
ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿಯವರ ಮಾತಿಗೆ ಪ್ರತಿಕ್ರಿಯೆ ನೀಡಬೇಕಿಲ್ಲ. ಆದರೆ ಅವರಿಗೆ ತಾಕತ್ತಿದ್ದರೆ ಮುಸಲ್ಮಾನರನ್ನು ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎಂದು ಡಾ| ಕೆ.ಸುಧಾಕರ್‌ ಸವಾಲು ಹಾಕಿದ್ದಾರೆ. ಕುಮಾರಸ್ವಾಮಿ ಅವರ ಮಾತು ಅಗತ್ಯವೇ ಇರಲಿಲ್ಲ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಉತ್ತಮ ಆಡಳಿತಗಾರರು. ಬಿಜೆಪಿಗೆ ಕುಮಾರಸ್ವಾಮಿಯವರ ಸಲಹೆ ಬೇಕಿಲ್ಲ. ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿ ಸಿ.ಎಂ.ಇಬ್ರಾಹಿಂ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಕುಮಾರಸ್ವಾಮಿ ಘೋಷಿಸಲಿ. ಅವರು ಬಿಜೆಪಿಗೆ ಸವಾಲು ಹಾಕುವ ಮುನ್ನ, ಅವರಿಗೆ ಅವರೇ ಸವಾಲು ಹಾಕಿಕೊಳ್ಳಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next