Advertisement

ಭೋಪಾಲ್ ಅಖಾಡ; ದಿಗ್ವಿಜಯ್ ವಿರುದ್ಧ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್?

09:44 AM Apr 17, 2019 | Nagendra Trasi |

ನವದೆಹಲಿ: ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ ಎಂದು ಮಾಧ್ಯಮದ ವರದಿಯೊಂದು ತಿಳಿಸಿದೆ.

Advertisement

ಮಧ್ಯಪ್ರದೇಶದ ಸಾಗರ್, ವಿದಿಶಾ ಹಾಗೂ ಗುನಾ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಬಿಜೆಪಿ ಅಂತಿಮಗೊಳಿಸಲಿದೆ ಎಂದು ಮೂಲಗಳು ಹೇಳಿವೆ. ವಿದಿಶಾದಿಂದ ರಮಾಕಾಂತ್ ಭಾರ್ಗವ್ ಗೆ ಬಿಜೆಪಿ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಸಾಗರ್ ಲೋಕಸಭಾ ಕ್ಷೇತ್ರದಿಂದ ರಾಜ್ ಬಹದೂರ್ ಸಿಂಗ್, ಗುನಾ ಕ್ಷೇತ್ರದಿಂದ ಕೆಪಿ ಯಾದವ್ ಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿರುವುದಾಗಿ ವರದಿ ವಿವರಿಸಿದೆ.

ಒಂದು ವೇಳೆ ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧಿಸಬೇಕೆಂದು ಬಿಜೆಪಿ ನಿರ್ಧರಿಸಿದರೆ ನಾನು ಸ್ಪರ್ಧಿಸಲು ಸಿದ್ಧ ಎಂದು ಸಾಧ್ವಿ ಪ್ರಗ್ಯಾ ಸಿಂಗ್ ತಿಳಿಸಿದ್ದಾರೆ. ಸಿಂಗ್ ವಿರುದ್ಧ ಸ್ಪರ್ಧಿಸುವುದು ದೊಡ್ಡ ವಿಷಯವಲ್ಲ, ಯಾಕೆಂದರೆ ನಾನು ರಾಷ್ಟ್ರೀಯವಾದಿ. ಆದರೆ ದಿಗ್ವಿಜಯ್ ಸಿಂಗ್ ದೇಶದ ವಿರುದ್ಧವೇ ಮಾತನಾಡುತ್ತಾರೆ ಎಂದು ಸಾಧ್ವಿ ಆರೋಪಿಸಿದ್ದಾರೆ.

ದಿಗ್ವಿಜಯ್ ಒಬ್ಬ ಮೋಸಗಾರ, ಅವರ ನಿಜವಾದ ಮುಖವಾಡ ಜನತೆಗೆ ತಿಳಿದಿದೆ ಎಂದು ಸಿಂಗ್ ಅವರ ಟೆಂಪಲ್ ರನ್ ಬಗ್ಗೆ ಸಾಧ್ವಿ ಈ ರೀತಿಯಾಗಿ ಟೀಕಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next