Advertisement

BJP ಬೆಳಗಾವಿಯಲ್ಲಿ ಬಂಡಾಯ ಶಮನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಭೆ

11:57 PM Apr 23, 2023 | Team Udayavani |

ಬೆಳಗಾವಿ : ಬೆಳಗಾವಿ ಜಿಲ್ಲೆಯ ಬಿಜೆಪಿಯಲ್ಲಿ ಎದ್ದಿರುವ ಬಂಡಾಯ ಶಮನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರವಿವಾರ ಮಹತ್ವದ ಸಭೆ ನಡೆಸಿದರು.

Advertisement

ಬೆಳಗಾವಿ ಉತ್ತರ ವಲಯದ ಬಿಜೆಪಿ ಕಚೇರಿಯಲ್ಲಿ ಜಿಲ್ಲೆಯ ಮುಖಂಡರ ಜೊತೆ ಸಭೆ ನಡೆಸಿದ ಪ್ರಹ್ಲಾದ ಜೋಶಿ ಅವರು ಬಂಡಾಯ ಅಭ್ಯರ್ಥಿ ಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಮುಖ್ಯವಾಗಿ ಟಿಕೆಟ್ ಹಂಚಿಕೆ ವಿಚಾರವಾಗಿ ಉಂಟಾಗಿರುವ ಗೊಂದಲ ಸರಿಪಡಿಸುವುದು ಹಾಗೂ ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶ ನಡೆಸುವ ಕುರಿತು ಚರ್ಚೆ ನಡೆಸಿದರು.

ಈಗಾಗಲೇ ಟಿಕೆಟ್ ನಿರಾಕರಣೆಯಿಂದ ಮುನಿಸಿಕೊಂಡಿದ್ದ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರೆ. ಶಾಸಕ ಮಹಾದೇವಪ್ಪ ಯಾದವಾಡ, ಯಮಕನಮರಡಿ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಮಾರುತಿ ಅಷ್ಟಗಿ ಸೇರಿದಂತೆ ಅನೇಕರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಈ ಬಂಡಾಯ ಶಮನ ಮಾಡುವದಲ್ಲದೆ ಬಂಡಾಯವೆದ್ದು ನಾಮಪತ್ರ ಸಲ್ಲಿಸಿರುವ ರಾಮದುರ್ಗ ದ ಹಾಲಿ ಶಾಸಕ ಮಹದೇವಪ್ಪ ಯಾದವಾಡ ಅವರು ನಾಮಪತ್ರ ಹಿಂದಕ್ಕೆ ಪಡೆಯುವ ಬಗ್ಗೆ ಸಹ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ನಿರ್ಮಲ ಕುಮಾರ್ ಸುರಾನಾ, ಸಂಸದೆ ಮಂಗಲಾ ಅಂಗಡಿ, ಈರಣ್ಣಾ ಕಡಾಡಿ, ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ರಮೇಶ್ ಕತ್ತಿ, ಸೇರಿದಂತೆ ಬಿಜೆಪಿ ಅಭ್ಯರ್ಥಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next