Advertisement

DK Suresh ನಿವಾಸದ ಎದುರು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ; ಆಕ್ರೋಶ

02:03 PM Feb 04, 2024 | Team Udayavani |

ಬೆಂಗಳೂರು: ಅನುದಾನ ಹಂಚಿಕೆಯಲ್ಲಿ ಆಗಿರುವ ‘ಅನ್ಯಾಯ’ವನ್ನು ಕೇಂದ್ರವು ಸರಿಪಡಿಸದಿದ್ದರೆ ದಕ್ಷಿಣದ ರಾಜ್ಯಗಳು ಪ್ರತ್ಯೇಕ ರಾಷ್ಟ್ರಕ್ಕಾಗಿ ಒತ್ತಾಯಿಸಬೇಕಾಗುತ್ತದೆ ಎಂಬ ಹೇಳಿಕೆಯನ್ನು ವಿರೋಧಿಸಿ ನೂರಾರು ಬಿಜೆಪಿಯಕಾರ್ಯಕರ್ತರು ಭಾನುವಾರ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರ ಸದಾಶಿವನಗರದಲ್ಲಿರುವ ನಿವಾಸದ ಮುಂದೆ ಜಮಾಯಿಸಿ ಆಕ್ರೋಶ ಹೊರ ಹಾಕಿದರು.

Advertisement

ಪ್ರತಿಭಟನಾಕಾರರು ‘ವಂದೇ ಮಾತರಂ’, ‘ಭಾರತ್ ಮಾತಾ ಕೀ ಜೈ’, ‘ಡೌನ್ ಡೌನ್ ಡಿ ಕೆ ಸುರೇಶ್’ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರನ್ನು ಕೂಡಲೇ ಪೊಲೀಸರು ಸ್ಥಳದಿಂದ ವಶಕ್ಕೆ ಪಡೆದು ಬಸ್ ಮೂಲಕ ಬೇರೆಡೆಗೆ ಸ್ಥಳಾಂತರಿಸಿದರು.

”ಕಾಂಗ್ರೆಸ್ ಸಂಸದರ ನಿವಾಸದ ಹೊರಗೆ ಬಿಜೆಪಿ ಕಾರ್ಯಕರ್ತರು ಜಮಾಯಿಸಿದ್ದರು. ಆದರೆ, ನಮ್ಮ ಅಧಿಕಾರಿಗಳು ತತ್ ಕ್ಷಣ ಅವರನ್ನು ಸ್ಥಳದಿಂದ ವಶಕ್ಕೆ ತೆಗೆದುಕೊಂಡರು. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸುರೇಶ್ ಅವರು ಈ ಹಿಂದೆ ದಕ್ಷಿಣ ಭಾರತದ ಮೇಲೆ ಎಲ್ಲ ಅಂಶಗಳಲ್ಲೂ ಹಿಂದಿಯನ್ನು ಹೇರಲಾಗುತ್ತಿದೆ ಎಂದು ಆರೋಪಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next