Advertisement

ಶತ್ರುಘ್ನಗೆ ಇಲ್ಲ ಟಿಕೆಟ್‌?

09:33 AM Sep 20, 2018 | Team Udayavani |

ಪಟ್ನಾ: ಬಿಜೆಪಿ ಮುಖಂಡರ ವಿರುದ್ಧ ಪದೇ ಪದೇ ಹೇಳಿಕೆ ನೀಡುತ್ತಿರುವ ಹಾಲಿ ಸಂಸದ ಶತ್ರುಘ್ನ ಸಿನ್ಹಾಗೆ ಬಿಹಾರದ ಪಟ್ನಾ ಸಾಹಿಬ್‌ ಕ್ಷೇತ್ರದಿಂದ 2019ರ ಲೋಕಸಭೆ ಚುನಾವಣೆಗೆ ಟಿಕೆಟ್‌ ನೀಡದೇ ಇರಲು ಚಿಂತನೆ ನಡೆಯುತ್ತಿದೆ. ಈ ಬಗ್ಗೆ “ಝೀ ನ್ಯೂಸ್‌’ ವರದಿ ಮಾಡಿದೆ.

Advertisement

ಈ ಕ್ಷೇತ್ರದಿಂದ  ಬಿಹಾರ ಉಪಮುಖ್ಯಮಂತ್ರಿ ಸುಶೀಲ್‌ ಕುಮಾರ್‌ ಮೋದಿ ಅವರನ್ನು ಕಣಕ್ಕೆ ಇಳಿಸಲು ಬಿಜೆಪಿ ಇರಾದೆ ಹೊಂದಿದೆ ಎನ್ನಲಾಗಿದೆ. ಸನ್ನಿವೇಶ ಬದಲಾದರೂ ನಾನು ಇದೇ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಸಿನ್ಹಾ ಈ ಹಿಂದೆ ಹೇಳಿದ್ದರು. ಇದೇ ವೇಳೆ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಭೇಟಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next