Advertisement

ಮಹದಾಯಿ ವಿಚಾರದಲ್ಲಿ ಬಿಜೆಪಿಯವರು ಜನರ ದಾರಿ ತಪ್ಪಿಸುತ್ತಿದ್ದಾರೆ: ಕೋನರೆಡ್ಡಿ

09:30 AM Sep 14, 2019 | Team Udayavani |

ಬೆಂಗಳೂರು: ಮಹದಾಯಿ ನ್ಯಾಯಾಧಿಕರಣದ ಆದೇಶ ಬಂದು ಒಂದು ವರ್ಷವಾಗಿದೆ. ಈಗ ಬಿಜೆಪಿಯವರು ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮಾತುಕತೆ ಮೂಲಕ ಬಗೆ ಹರಿಸಿಕೊಳ್ಳುವ ಬಗ್ಗೆ ಯಾಕೆ ಮಾತನಾಡುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ ಜೆಡಿಎಸ್‌ ವಕ್ತಾರ ಕೋನರೆಡ್ಡಿ ಅಭಿಪ್ರಾಯಪಟ್ಟರು.

Advertisement

ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಹ್ಲಾದ ಜೋಷಿಯವರು ಮಾತುಕತೆ ಮೂಲಕ ಬಗೆ ಹರಿಸಿಕೊಳ್ಳಬೇಕು ಎಂದು ಏಕೆ ಹೇಳುತ್ತಿದ್ದಾರೊ ಗೊತ್ತಿಲ್ಲ. ನ್ಯಾಯಾಧಿಕರಣದ ಆದೇಶವನ್ನು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕು. ಅದನ್ನು ಬಿಟ್ಟು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದರು.

ಉತ್ತರ ಕರ್ನಾಟಕದ ಜನರು ನಿಮ್ಮ ಪಕ್ಷಕ್ಕೆ ಸಂಪೂರ್ಣ ಬೆಂಬಲ. ಸೂಚಿಸಿದ್ದಾರೆ. ಮೂರು ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ಈಗ ಕಾಲ ಹರಣ ಮಾಡುವ ಬದಲು ಅಧಿಸೂಚನೆ ಹೊರಡಿಸುವ ಕೆಲಸ ಮಾಡಬೇಕು. ಬಿಜೆಪಿಯವರು ಭಂಡತನದಿಂದ ಸುಳ್ಳು ಹೇಳುವ ಕೆಲಸ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಸುಳ್ಳು ಹೇಳಿದ್ದೀರಿ. ಈಗಲಾದರೂ ಕೆಲಸ ಮಾಡಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next