Advertisement

ಹೋಳಿ ಸಂಭ್ರಮಾಚರಣೆ ವೇಳೆ ಬಿಜೆಪಿ ಶಾಸಕನ ಮೇಲೆ ಗುಂಡು 

01:12 PM Mar 21, 2019 | |

ಲಕ್ನೋ : ಉತ್ತರ ಪ್ರದೇಶದ ಲಖೀಮ್‌ಪುರ್‌ ಖೇರಿಯಲ್ಲಿ  ಹೋಳಿ ಸಂಭ್ರಮದಲ್ಲಿ ಭಾಗಿಯಾಗಿದ್ದ ಬಿಜೆಪಿ ಶಾಸಕರೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ ಘಟನೆ ಗುರುವಾರ ನಡೆದಿದೆ.

Advertisement

ಶಾಸಕ ಯೋಗೇಶ್‌ ವರ್ಮಾ ಅವರು  ಪಕ್ಷದ ಕಚೇರಿಯಲ್ಲಿ  ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರೊಂದಿಗೆ ಹೋಳಿ ಸಂಭ್ರಮದಲ್ಲಿದ್ದ ವೇಳೆ ವಾಗ್ವಾದ ಉಂಟಾಗಿದ್ದು , ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಯೋಗೇಶ್‌ ಅವರ ಕಾಲಿಗೆ ಗುಂಡು ತಗುಲಿ ಕುಸಿದು ಬಿದ್ದಿದ್ದಾರೆ.

ತಕ್ಷಣ ಶಾಸಕ ಯೋಗೇಶ್‌ ಅವರನ್ನು  ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣಕ್ಕೆ ಯಾವುದೇ ಹೇಳಿಕೆ ನೀಡಲು ಅವರು ಶಕ್ತರಿಲ್ಲ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next