Advertisement

BJP ಶಾಸಕ ಹೇಳಿಕೆ: ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆದರೆ ಸಂತೋಷ!

11:50 AM Sep 11, 2024 | Team Udayavani |

ಬೆಳಗಾವಿ : ಮುಖ್ಯಮಂತ್ರಿ ಸ್ಥಾನಕ್ಕೆ ಉತ್ತರ ಕರ್ನಾಟಕದ ನಾಯಕ ಸತೀಶ್ ಜಾರಕಿಹೊಳಿ ನೇಮಕವಾದರೆ ಸಂತೋಷ ಎಂದು ಖಾನಾಪುರ ಕ್ಷೇತ್ರದ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ ಹೇಳಿಕೆ ಬುಧವಾರ(ಸೆ11) ನೀಡಿದ್ದಾರೆ.

Advertisement

ಬೆಳಗಾವಿಯಲ್ಲಿ ಮಾತನಾಡಿದ ಹಲಗೇಕರ, ‘ಸತೀಶ ಜಾರಕಿಹೊಳಿ ಬೆಳಗಾವಿ ಜಿಲ್ಲೆಯವರು. ಅದರಲ್ಲೂ ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಅವರು ಈ ಭಾಗದ ಸಮಸ್ಯೆಗಳಿಗೆ ಹೆಚ್ಚಾಗಿ ಸ್ಪಂದಿಸಲಿದ್ದಾರೆ. ಸತೀಶ ಜಾರಕಿಹೊಳಿ ಅವರಿಗೆ ಸ್ಥಳೀಯ ಸಮಸ್ಯೆಗಳ ಅರಿವಿದೆ. ಹಿಂದುಳಿದಿರುವ ಖಾನಾಪುರ ತಾಲೂಕಿನ ಸಮಸ್ಯೆಗಳಿಗೆ ಅವರು ಸ್ಪಂದಿಸಲಿದ್ದಾರೆ ಎಂಬ ವಿಶ್ವಾಸವಿದೆ. ಅವರ ಜತೆಗೆ ನನಗೆ ಉತ್ತಮ ಸಂಬಂಧ ಇದ್ದು ಒಂದು ವೇಳೆ ಅವರು ಮುಖ್ಯಮಂತ್ರಿ ಆದರೆ ಸಂತೋಷ’ ಎಂದರು.

ಸತೀಶ್ ಜಾರಕಿಹೊಳಿ ಪರವಾಗಿ ಅಭಿಮಾನಿಗಳು ಆರಂಭಿಸಿರುವ ಅಭಿಯಾನಕ್ಕೆ ಬಿಜೆಪಿ ಶಾಸಕ ಪರೋಕ್ಷ ಬೆಂಬಲ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next