Advertisement
ವಿಜಯ್ ಕುಮಾರ್ ಅವರ ನಿಧನದಿಂದ ಜಯನಗರ ಕ್ಷೇತ್ರದ ಚುನಾವಣೆ ಮುಂದೂಡಿಕೆಯಾಗುವ ಸಾಧ್ಯತೆಗಳಿವೆ .
Related Articles
Advertisement
ಕೇಂದ್ರ ಸಚಿವರಾದ ಅನಂತ್ಕುಮಾರ್, ಡಿ.ವಿ.ಸದಾನಂದ ಗೌಡ, ಮಾಜಿ ಸಚಿವ ಆರ್.ಅಶೋಕ್, ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ಸಂಸದ ಪಿ.ಸಿ.ಮೋಹನ್, ಕಾಂಗ್ರೆಸ್ ಅಭ್ಯರ್ಥಿ ಸಚಿವ ರಾಮಲಿಂಗಾ ರೆಡ್ಡಿ ಸೇರಿದಂತೆ ನಗರದ ಹಲವು ಶಾಸಕರು, ಬಿಜೆಪಿ, ಕಾಂಗ್ರೆಸ್ ಮುಖಂಡರು ಪಕ್ಷಾತೀತವಾಗಿ ಅಂತಿಮ ದರ್ಶನ ಪಡೆದಿದ್ದಾರೆ.
ನೇತ್ರದಾನ
ವಿಜಯ್ಕುಮಾರ್ ಅವರು ಕಣ್ಣುಗಳನ್ನು ದಾನ ಮಾಡಿ ಆದರ್ಶ ಮೆರೆದಿದ್ದಾರೆ.
ಚಾಮರಾಜ ಪೇಟೆ ರುದ್ರ ಭೂಮಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಅವಿವಾಹಿತ,ಸಂಘದ ಕಾರ್ಯಕರ್ತ
ಚಿಕ್ಕಂದಿನಲ್ಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದ ವಿಜಯ ಕುಮಾರ್ ಅವರು ಅವಿವಾಹಿತರು. ಬಿಜೆಪಿಯ ಸಜ್ಜನ ರಾಜಕಾರಣಿ ಎಂಬ ಹೆಸರಿಗೆ ಪಾತ್ರರಾದವರಲ್ಲಿ ವಿಜಯಕುಮಾರ್ ಅವರು ಒಬ್ಬರು.