Advertisement

ಬಿಜೆಪಿಗೆ ಬಾಬುರಾವ್‌ ಚಿಂಚನಸೂರ್‌ ರಾಜೀನಾಮೆ

10:55 PM Mar 20, 2023 | Team Udayavani |

ಬೆಂಗಳೂರು: ವಿಧಾನ ಪರಿಷತ್ತಿನ ಸದಸ್ಯರಾದ ಬಿಜೆಪಿಯ ಬಾಬುರಾವ್‌ ಚಿಂಚನಸೂರು ಅವರು ಕೊನೆಗೂ ಬಿಜೆಪಿಗೆ ವಿದಾಯ ಹೇಳಿದ್ದಾರೆ.

Advertisement

ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಸೋಮವಾರ ಮಧ್ಯಾಹ್ನ ಖುದ್ದಾಗಿ ಭೇಟಿಯಾಗಿ ತನ್ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅದನ್ನು ಅಂಗೀಕರಿಸಲಾಗಿದೆ. ಜತೆಗೆ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಇದರೊಂದಿಗೆ ಅವರು ಕಾಂಗ್ರೆಸ್‌ ಸೇರುವ ಸಾಧ್ಯತೆಗಳು ಹೆಚ್ಚಿವೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ನಿಗದಿಯಾಗಿರುವ ಕಾರ್ಯಕ್ರಮದಲ್ಲಿ ಅವರು ಮತ್ತೆ ಕಾಂಗ್ರೆಸ್‌ ಸೇರಲಿದ್ದಾರೆ ಎನ್ನಲಾಗಿದೆ.

ಗುರುಮಿಠಕಲ್‌ ಹಾಗೂ ಚಿತ್ತಾಪುರ ವಿಧಾನಸಭಾ ಕ್ಷೇತ್ರಗಳಿಂದ 5 ಸಲ ಶಾಸಕರಾಗಿದ್ದ ಆಯ್ಕೆಯಾಗಿದ್ದ ಚಿಂಚನಸೂರ್‌ ಅವರು ಕಳೆದ 2018ರ ಚುನಾವಣೆಯಲ್ಲಿ ಸೋತ ಬಳಿಕ ಬಿಜೆಪಿ ಸೇರಿದ್ದರು.

ಕಾಂಗ್ರೆಸ್‌ನಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದ ಸಿ.ಎಂ.ಇಬ್ರಾಹಿಂ ಅವರು ಜೆಡಿಎಸ್‌ಗೆ ಸೇರಿದ ಕಾರಣ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಆಗ ಆ ಸ್ಥಾನಕ್ಕೆ ಬಿಜೆಪಿಯು ಚಿಂಚನಸೂರ್‌ ಅವರನ್ನು ಪರಿಷತ್ತಿಗೆ ಕಳಹಿಸಿತ್ತು. ಇವರ ಅವಧಿ 2024ರ ವರೆಗೂ ಇತ್ತು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next