Advertisement

ಮಂತ್ರಿ ಮಾಡ್ತೀನಿ ಎಂದು ಹೇಳಿ ಮಾತು ತಪ್ಪಿದ್ದೀರಿ: ಸ್ವಪಕ್ಷದ ವಿರುದ್ಧ ಆರ್.ಶಂಕರ್ ಆಕ್ರೋಶ

12:20 PM Sep 14, 2022 | Team Udayavani |

ಬೆಂಗಳೂರು : ಮಂತ್ರಿ ಮಾಡ್ತೀನಿ ಎಂದು ಹೇಳಿ ಮಾತು ತಪ್ಪಿದ್ದೀರಿ ಎಂದು ವಿಧಾನ ಪರಿಷತ್ ಸದಸ್ಯ ಆರ್.ಶಂಕರ್ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಮಂಗಳವಾರ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಂಕರ್ ಬೇಸರ ವ್ಯಕ್ತಪಡಿಸಿದ್ದಾರೆ.

ಆಗ ಕಿವಿ ಮಾತು ಹೇಳುವುದಕ್ಕೆ ಹೋದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಗ್ಗೆಯೂ ಶಂಕರ್‌ ಬೇಸರಗೊಂಡರು.

ಇದನ್ನೂ ಓದಿ: ಜಮ್ಮು ಕಾಶ್ಮೀರದ ಪೂಂಛ್ ನಲ್ಲಿ ಕಂದಕಕ್ಕೆ ಉರುಳಿದ ಬಸ್ : 9 ಮಂದಿ ಸಾವು, ಹಲವರಿಗೆ ಗಾಯ

ಇದೇ ರೀತಿ ಆದರೆ ನನ್ನ ಮುಂದಿನ ರಾಜಕೀಯ ಭವಿಷ್ಯ ಏನಾಗಬೇಕು ? ನೀವು ಮಾಡಿದ್ದು ಸರಿನಾ ? ನನಗೆ ನಂಬಿಸಿ ಮೋಸ ಮಾಡಿದರಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಆರ್.ಶಂಕರ್ ವಾಗ್ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ನೀವು ಇನ್ನೂ ಸಂಪುಟ ವಿಸ್ತರಣೆ ಮಾಡಿಲ್ಲ, ನಾನು ಕ್ಷೇತ್ರವನ್ನೂ ಕಳೆದುಕೊಂಡಿದ್ದೇನೆ ಎಂದಾಗ ಸಮಾಧಾನಪಡಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ಆದಷ್ಟು ಬೇಗ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next