Advertisement

ಬಿಜೆಪಿ ಸಂಸದ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಗೆ ಐಸಿಸ್ ನಿಂದ ಕೊಲೆ ಬೆದರಿಕೆ

11:12 AM Nov 24, 2021 | Team Udayavani |

ನವದೆಹಲಿ:”ತನಗೆ ಐಸಿಸ್ ಕಾಶ್ಮೀರ್” ಸಂಘಟನೆಯಿಂದ ಕೊಲೆ ಬೆದರಿಕೆ ಕರೆ ಬಂದಿರುವುದಾಗಿ ಪೂರ್ವ ದೆಹಲಿ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಸಂಸದ, ಮಾಜಿ ಕ್ರಿಕೆಟಿಗೆ ಗೌತಮ್ ಗಂಭೀರ್ ಆರೋಪಿಸಿದ್ದು, ದೆಹಲಿ ಪೊಲೀಸರನ್ನು ಸಂಪರ್ಕಿಸಿ ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ.

Advertisement

ಪೂರ್ವ ದೆಹಲಿ ಕ್ಷೇತ್ರದ ಸಂಸದ ಗೌತಮ್ ಗಂಭೀರ್ ಅವರಿಗೆ ಐಸಿಸ್ ಕಾಶ್ಮೀರ್ ನಿಂದ ಜೀವ ಬೆದರಿಕೆ ಕರೆ ಬಂದಿದ್ದು, ಈ ಬಗ್ಗೆ ದೆಹಲಿ ಪೊಲೀಸರನ್ನು ಸಂಪರ್ಕಿಸಿರುವುದಾಗಿ ಡಿಸಿಪಿ ಶ್ವೇತಾ ಚೌಹಾಣ್ ಎಎನ್ ಐಗೆ ತಿಳಿಸಿದ್ದಾರೆ.

ಈ ಬಗ್ಗೆ ತನಿಖೆ ನಡೆಯುತ್ತಿದೆ. ಅಲ್ಲದೇ ಗೌತಮ್ ಗಂಭೀರ್ ಅವರ ನಿವಾಸದ ಹೊರಭಾಗದಲ್ಲಿ ಭದ್ರತೆಯನ್ನು ನೀಡಲಾಗಿದೆ ಎಂದು ಡಿಸಿಪಿ ಶ್ವೇತಾ ಅವರು ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ…

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next