Advertisement

ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿ: ಬಿಜೆಪಿ ಸಂಸದ ಕೆ.ಸಿ. ರಾಮಮೂರ್ತಿ

08:03 PM Dec 09, 2021 | Team Udayavani |

ನವದೆಹಲಿ: ದೇಶದಲ್ಲಿ ಎಲ್ಲ ಧರ್ಮಗಳ ಉತ್ತಮ ವಿಚಾರಗಳನ್ನು ಹೆಕ್ಕಿ, ಅದನ್ನು ವಿಶ್ಲೇಷಿಸಿ, ಏಕರೂಪ ನಾಗರಿಕ ಸಂಹಿತೆಯಲ್ಲಿ ಸೇರಿಸಬೇಕೆಂದು ಬೆಂಗಳೂರು ಬಿಜೆಪಿ ಸಂಸದ ಕೆ.ಸಿ. ರಾಮಮೂರ್ತಿ ರಾಜ್ಯಸಭೆಯಲ್ಲಿ ಗುರುವಾರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Advertisement

“ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಜನರಿಗೆ ಏಕರೂಪ ನಾಗರಿಕ ಸಂಹಿತೆಯನ್ನು ಅಳವಡಿಸುವ ಪ್ರಯತ್ನ ಮಾಡಬೇಕೆಂದು ಸಂವಿಧಾನದ ಕಲಂ 14 ಹೇಳುತ್ತದೆ. ಯುನೈಟೆಡ್‌ ಕಿಂಗ್‌ಡಮ್‌, ಅಮೆರಿಕ ಮತ್ತು ಐರೋಪ್ಯ ರಾಷ್ಟ್ರಗಳಲ್ಲಿ ಈಗಾಗಲೇ ಈ ಸಂಹಿತೆ ಜಾರಿಯಲ್ಲಿದೆ. ಗೋವಾ ಕೂಡ ಈ ಕಾಯ್ದೆಯನ್ನು ಜಾರಿಗೊಳಿಸಿದೆ. ನಮ್ಮಲ್ಲಿ ಈ ಸಂಹಿತೆ ಬಗ್ಗೆ ಇರುವ ತಪ್ಪು ಕಲ್ಪನೆಯನ್ನು ತೆಗೆದುಹಾಕಬೇಕು ಮತ್ತು ಸರ್ಕಾರದ ವತಿಯಿಂದ ಸಂಹಿತೆಯನ್ನು ಜಾರಿಗೊಳಿಸುವಂತಾಗಬೇಕು’ಎಂದು ಅವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next