Advertisement

ಬಿಜೆಪಿ ಸಂಸದ ಕೌಶಲ್ ಕಿಶೋರ್ ಪುತ್ರನ ಮೇಲೆ ಅಪರಿಚಿತ ದುಷ್ಕರ್ಮಿಗಳಿಂದ ಗುಂಡಿನ ದಾಳಿ

09:05 AM Mar 03, 2021 | Team Udayavani |

ಲಕ್ನೋ: ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಿಜೆಪಿ ಸಂಸದ ಕೌಶಲ್ ಕಿಶೋರ್ ಪುತ್ರನ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಇಂದು (ಮಾ.3) ಮುಂಜಾನೆ ಮಡಿಯಾವ ಪ್ರದೇಶದಲ್ಲಿ ನಡೆದಿದೆ.

Advertisement

ಪ್ರಾಥಮಿಕ ವರದಿಯ ಪ್ರಕಾರ ಕೌಶಲ್ ಕಿಶೋರ್ ಪುತ್ರ ಆಯುಷ್ (30) ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಬೈಕ್ ನಲ್ಲಿ ಬಂದ ಆಗಂತುಕರು ಏಕಾಏಕಿ ಗುಂಡು ಹಾರಿಸಿದ್ದಾರೆ, ಪರಿಣಾಮ ಆಯುಷ್ ಎದೆಯ ಭಾಗಕ್ಕೆ ಗಾಯಗಳಾಗಿದ್ದು, ಸ್ಥಳಕ್ಕೆ ಬಂದ ಉತ್ತರಪ್ರದೇಶ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸದ್ಯ ಆಯುಷ್ ಪ್ರಾಣಾಪಾಯದಿಂದ ಪಾರಾಗಿದ್ದು, ಉತ್ತರಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲವಾಗಿದ್ದು, ಪೊಲೀಸರು ಹಳೆ ವೈಷಮ್ಯವೇ ಕಾರಣವಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಇಂದಿರಾಗಾಂಧಿ ತುರ್ತುಪರಿಸ್ಥಿತಿ ಹೇರಿಕೆ ತಪ್ಪುನಿರ್ಧಾರ; ಆದರೆ RSS ಇಂದು.. :ರಾಹುಲ್ ಗಾಂಧಿ

ಈ ಕುರಿತು ಮಾಹಿತಿ  ನೀಡಿದ ಸಂಸದ ಕೌಶಲ್ ಕಿಶೋರ್,  ಆಯುಷ್ ಪ್ರಾಣಾಪಾಯದಿಮದ ಪಾರಾಗಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳೀಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ದುಷ್ಕರ್ಮಿಗಳನ್ನು ಶೀಘ್ರವಾಗಿ ಪತ್ತೆಹಚ್ಚುವ ವಿಶ್ವಾಸವಿದೆ ಎಂದರು.

Advertisement

Advertisement

Udayavani is now on Telegram. Click here to join our channel and stay updated with the latest news.

Next