Advertisement

ಇನ್ಸ್ ಪೆಕ್ಟರ್ ಗೆ ತರಾಟೆ; ಸಂಸದ ನಳಿನ್ ಕುಮಾರ್ ವಿರುದ್ಧ ಕೇಸ್

06:09 PM Sep 08, 2017 | Sharanya Alva |

ಮಂಗಳೂರು: ಮಂಗಳೂರು ಚಲೋ ವೇಳೆ ಬಂಧಿತ ಕಾರ್ಯಕರ್ತರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಇನ್ಸ್ ಪೆಕ್ಟರ್ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಆರೋಪದಡಿಯಲ್ಲಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧ ದೂರು ದಾಖಲಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

ಕದ್ರಿಯ ಗೋರಕ್ಷಕನಾಥ ಛತ್ರದಲ್ಲಿ ಇನ್ಸ್ ಪೆಕ್ಟರ್ ಮಾರುತಿ ನಾಯಕ್ ಅವರಲ್ಲಿ ಸಂಸದ ನಳಿನ್ ಕುಮಾರ್ ಅವರು ದರ್ಪದಿಂದ ನಡೆದುಕೊಂಡಿರುವುದಾಗಿ ಆರೋಪಿಸಲಾಗಿದೆ.

ತನಗೆ ಸಂಸದ ನಳಿನ್ ಕುಮಾರ್ ಅವರು ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಹಾಕಿರುವುದಾಗಿ ಇನ್ಸ್ ಪೆಕ್ಟರ್ ಮಾರುತಿ ನಾಯಕ್ ಅವರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಕೇಸ್ ದಾಖಲಾಗಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next