Advertisement

ದರ್ಶನ್ ಬಗ್ಗೆ ಇಡೀ ಕರ್ನಾಟಕಕ್ಕೆ ಗೊತ್ತು: ಡಿ ಬಾಸ್ ಬೆಂಬಲಕ್ಕೆ ನಿಂತ ಸಂಸದ ಪಿ.ಸಿ ಮೋಹನ್

05:06 PM Jul 19, 2021 | Team Udayavani |

ಬೆಂಗಳೂರು :  ಬಿಜೆಪಿ ಸಂಸದ ಪಿ.ಸಿ. ಮೋಹನ್ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ದರ್ಶನ್ ಅವರ ವ್ಯಕ್ತಿತ್ವ ಎಂತಹದು ಎಂಬುದನ್ನು ಸಾರಿ ಹೇಳಿದ್ದಾರೆ.

Advertisement

ಇಂದು (ಜುಲೈ 19) ಟ್ವೀಟ್ ಮಾಡಿರುವ ಅವರು, ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಕಲಾ ಸೇವೆ ಸಲ್ಲುಸುತ್ತಿರುವ ದರ್ಶನ್ ತುಗೂದೀಪ ಅವರು ನನಗೆ ಆತ್ಮೀಯರು. ಚಾಲೆಂಜಿಂಗ್ ಸ್ಟಾರ್ ಯಾರೇ ಕಷ್ಟ ಎಂದರೂ ಸಹಾಯಕ್ಕೆ ನಿಲ್ಲುತ್ತಾರೆ. ರೈತರ ಹೋರಾಟ, ರೈತರ – ಕಲಾವಿದರ ಕಷ್ಟ, ಪ್ರಾಣಿಗಳ ಸಂಕಷ್ಟ ಅಂತಾ ಬಂದಾಗ ಒಂದು ಹೆಜ್ಜೆ ಮುಂದೆ ಬರುವುದು ದರ್ಶನ್ ಎಂದು ಕರ್ನಾಟಕಕ್ಕೇ ತಿಳಿದಿದೆ ಎಂದಿದ್ದಾರೆ.

 

ದರ್ಶನ್ ಅವರ ಕುರಿತು ಕೇಳಿ ಬಂದಿರುವ ಹಲ್ಲೆ ಆರೋಪದ ಕುರಿತು ಮಾತಾಡಿರುವ ಪಿ.ಸಿ ಮೋಹನ್, ಯಾವುದೇ ಆಧಾರವಿಲ್ಲದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಅನಗತ್ಯ ಆರೋಪ ಮಾಡಿ , ಅವರ ತೇಜೋವಧೆಗೆ ಯತ್ನಿಸುತ್ತಿರುವುದು ಕನ್ನಡ ಚಿತ್ರರಂಗಕ್ಕೆ ಶೋಭೆ ತರುವುದಿಲ್ಲ. ಚಿತ್ರರಂಗದ ಹಿರಿಯರು ಹಾಗೂ ವಾಣಿಜ್ಯ ಮಂಡಳಿ ಮಧ್ಯ ಪ್ರವೇಶಿಸಿ ಎಲ್ಲಾ ಗೊಂದಲಗಳನ್ನು ನಿವಾರಿಸಬೇಕೆಂದು ವಿನಂತಿಸಿಕೊಂಡಿದ್ದಾರೆ.

Advertisement

 

ಇನ್ನು ಮೈಸೂರಿನಲ್ಲಿ ದರ್ಶನ್ ಅವರು ಹೋಟೆಲ್ ವೇಟರ್ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪತ್ರಕರ್ತ ಇಂದ್ರಜಿತ್ ಲಂಕೇಶ್ ಅವರು ಆರೋಪಿಸಿದ್ದಾರೆ. ಇದಕ್ಕೆ ಬಹಿರಂಗ ಸವಾಲು ಹಾಕಿದ ದಚ್ಚು, ತಮ್ಮ ವಿರುದ್ಧದ ಆರೋಪಕ್ಕೆ ದಾಖಲೆ ಬಿಡುಗಡೆ ಮಾಡಿ ಎಂದಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next