Advertisement

ಬಿಜೆಪಿ ಸಂಸದರೂ ಸಹ ಕನ್ನಡಿಗರೇ 

01:21 AM Mar 01, 2019 | Team Udayavani |

ದಾವಣಗೆರೆ: ನಮ್ಮ ಬಿಜೆಪಿ ಸಂಸದರೂ ಸಹ ಕನ್ನಡಿಗರು. ಕನ್ನಡದಲ್ಲೇ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎನ್ನುವ ಮೂಲಕ ಬಿಜೆಪಿ ಹಿರಿಯ ಮುಖಂಡ ಎಸ್‌.ಸುರೇಶ್‌ ಕುಮಾರ್‌ ಅವರು, ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.

Advertisement

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ -ಕಾಂಗ್ರೆಸ್‌ ಮೈತ್ರಿಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ದೆಹಲಿಯಲ್ಲಿ ಕನ್ನಡಿಗರಿಗೆ ಧ್ವನಿ ಬರುತ್ತದೆ ಎಂಬ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ಕುರಿತಂತೆ ಅವರು ಪ್ರತಿಕ್ರಿಯೆ ನೀಡಿದರು. “ನಮ್ಮ ಬಿಜೆಪಿ ಸಂಸದರು ಸಹ ಕನ್ನಡಿಗರು. ಅವರು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಭಾಷೆಯನ್ನೂ ಸಹ ರಾಜಕೀಯಕ್ಕೆ ಬಳಸಿಕೊಳ್ಳಲೇಬಾರದು’
ಎಂದರು.

Advertisement

Udayavani is now on Telegram. Click here to join our channel and stay updated with the latest news.

Next