Advertisement

ಬಿಹಾರ ಕಳ್ಳಭಟ್ಟಿ ದುರಂತ; ಮೃತರಿಗೆ ಪರಿಹಾರ ಒದಗಿಸುವಂತೆ ಬಿಜೆಪಿ ಸಂಸದರ ಪ್ರತಿಭಟನೆ

03:28 PM Dec 23, 2022 | Team Udayavani |

ನವದೆಹಲಿ : ಬಿಹಾರದಲ್ಲಿ ನಡೆದ ಕಳ್ಳಭಟ್ಟಿ ದುರಂತದಲ್ಲಿ ಮೃತ ಪಟ್ಟವರ ಕುಟುಂಬಗಳಿಗೆ ಪರಿಹಾರ ಒದಗಿಸುವಂತೆ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಬಿಹಾರದ ಬಿಜೆಪಿ ಸಂಸದರು ಶುಕ್ರವಾರ ಸಂಸತ್ತಿನ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಸಿದರು.

Advertisement

ದುರಂತದಲ್ಲಿ 38 ಸಾವುಗಳನ್ನು ಬಿಹಾರ ಸರ್ಕಾರ ಖಚಿತಪಡಿಸಿದೆ. ಆದರೆ, ಈ ಅಂಕಿ ಅಂಶವನ್ನು ಬಿಜೆಪಿ ವಿರೋಧಿಸಿದ್ದು, 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.

”ಬಿಹಾರದಲ್ಲಿ ಮದ್ಯ ನಿಷೇಧವನ್ನು ಜಾರಿಗೊಳಿಸಲು ಕುಮಾರ್ ವಿಫಲರಾಗಿದ್ದಾರೆ.ಪೊಲೀಸರು ಮತ್ತು ಮದ್ಯ ಮಾಫಿಯಾ ನಡುವೆ ನಂಟು ಇದೆ. ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಅವರಿಗೆ ಪರಿಹಾರ ನೀಡುವುದು ರಾಜ್ಯ ಸರ್ಕಾರದ ನೈತಿಕ ಕರ್ತವ್ಯವಾಗಿದೆ ಎಂದು ಬಿಜೆಪಿ ನಾಯಕ ಸುಶೀಲ್ ಮೋದಿ ಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಬಿಜೆಪಿ ಸಂಸದ ರಾಮ್ ಕೃಪಾಲ್ ಯಾದವ್, “ನೈತಿಕ ಆಧಾರದ ಮೇಲೆ ನಿತೀಶ್ ಕುಮಾರ್ ರಾಜೀನಾಮೆ ನೀಡಬೇಕು. ಅವರು ಮುಖ್ಯಮಂತ್ರಿಯಾಗಿ ವಿಫಲರಾಗಿದ್ದಾರೆ. ಬಿಜೆಪಿ ಸಂಸದರಾದ ವಿವೇಕ್ ಠಾಕೂರ್, ರಾಧಾ ಮೋಹನ್ ಸಿಂಗ್, ಸುಶೀಲ್ ಸಿಂಗ್, ಅಶೋಕ್ ಯಾದವ್ ಮತ್ತು ಗೋಪಾಲ್ಜಿ ಠಾಕೂರ್ ಅವರು ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next