Advertisement

ಜೋಶಿಗೆ ಉತ್ತರಾಖಂಡ ಹೊಣೆ

12:36 AM Sep 09, 2021 | Team Udayavani |

ಹೊಸದಿಲ್ಲಿ: ಮುಂದಿನ ವರ್ಷಾ ರಂಭದಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಈಗಲೇ ಸಿದ್ಧತೆ ಆರಂಭಿಸಿರು ವ ಬಿಜೆಪಿ ಕೇಂದ್ರ ಸಚಿವರಾಗಿರುವ ಪ್ರಹ್ಲಾದ್‌ ಜೋಶಿ, ಶೋಭಾ ಕರಂದ್ಲಾಜೆ ಸೇರಿದಂತೆ 8 ಮಂದಿ ಹಿರಿಯ ನಾಯಕರನ್ನು ಉಸ್ತುವಾರಿಗಳನ್ನಾಗಿ ನೇಮಿಸಿದೆ.

Advertisement

ಉತ್ತರ ಪ್ರದೇಶಕ್ಕೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರನ್ನು ನಿಯೋಜಿಸ ಲಾಗಿದೆ. ಉಡುಪಿ-ಚಿಕ್ಕಮಗಳೂರು ಸಂಸದೆ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ಸಚಿವರಾದ ಅನುರಾಗ್‌ ಸಿಂಗ್‌ ಠಾಕೂರ್‌, ಅರ್ಜುನ್‌ ರಾಮ್‌ ಮೇಘ್ವಾಲ್‌, ಅನ್ನಪೂರ್ಣಾ ದೇವಿ, ಹರಿಯಾಣದ ಮಾಜಿ ಸಚಿವ ಕ್ಯಾ| ಅಭಿಮನ್ಯು, ರಾಜ್ಯಸಭಾ ಸದಸ್ಯರಾಗಿರುವ  ಸರೋಜ್‌ ಪಾಂಡೆ, ವಿವೇಕ್‌ ಠಾಕೂರ್‌ ಸಹ ಉಸ್ತುವಾರಿಗಳಾಗಿದ್ದಾರೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿಗೆ ಉತ್ತರಾಖಂಡದ ಹೊಣೆ ನೀಡಲಾಗಿದೆ. ಅವರ ಜತೆಗೆ ಸಂಸದ ಲಾಕೆಟ್‌ ಚಟರ್ಜಿ, ವಕ್ತಾರ ಆರ್‌.ಪಿ. ಸಿಂಗ್‌ ಅವರನ್ನು ನೇಮಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next