Advertisement

ದೆಹಲಿಯಲ್ಲಿ ಜ.16, 17ಕ್ಕೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ

10:00 PM Jan 03, 2023 | Team Udayavani |

ಹೊಸದಿಲ್ಲಿ: ಪ್ರಸಕ್ತ ವರ್ಷ ಕರ್ನಾಟಕವೂ ಸೇರಿದಂತೆ ಒಂಭತ್ತು ರಾಜ್ಯಗಳಲ್ಲಿ ವಿಧಾನಸಭೆಗಳ ಚುನಾವಣೆ ನಡೆಯಲಿದ್ದು, ಬಿಜೆಪಿ ತಯಾರಿ ಆರಂಭಿಸಿದೆ. ಇದೇ 16 ಮತ್ತು 17ರಂದು ಹೊಸದಿಲ್ಲಿಯಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯಲಿದ್ದು, ಇದರಲ್ಲಿ ವಿಧಾನಸಭೆ ಚುನಾವಣೆಗಳು ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಮುಂದುವರಿಕೆ ಬಗ್ಗೆ ಚರ್ಚೆಯಾಗಲಿದೆ.

Advertisement

2024ಕ್ಕೆ ಲೋಕಸಭೆ ಚುನಾವಣೆ ಇರುವ ಹಿನ್ನೆಲೆಯಲ್ಲಿ ನಡ್ಡಾ ಅವರನ್ನೇ ಮುಂದುವರಿಸುವುದು ಸೂಕ್ತ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಅದಕ್ಕೆ ಅಧಿಕೃತ ಅನುಮೋದನೆ ಸಿಗುವುದು ಬಹುತೇಕ ಖಚಿತವಾಗಿದೆ.

ಹಾಗೆಯೇ ಸಭೆಯಲ್ಲಿ ಗುಜರಾತ್‌ ಮತ್ತು ಹಿಮಾಚಲ ಪ್ರದೇಶದ ಚುನಾವಣೆ ಫ‌ಲಿತಾಂಶಗಳ ವಿಶ್ಲೇಷಣೆ ನಡೆಯಲಿದೆ. ಇದರ ಜತೆಗೆ 2024ರ ಮೇ ಬಳಿಕವೇ ಪಕ್ಷದ ಆಂತರಿಕ ಚುನಾವಣೆಯನ್ನು ನಡೆಸುವ ಬಗ್ಗೆ ನಿರ್ಧಾರ ಮಾಡುವ ಸಾಧ್ಯತೆಗಳಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next