ಬೆಂಗಳೂರು: ನರೇಂದ್ರ ಮೋದಿ ಅವರ ನೇತೃತ್ವದ ಭಾರತೀಯ ಜನತಾ ಪಕ್ಷ ಸಹಿತವಾಗಿರುವ ಎನ್.ಡಿ.ಎ. ಸರಕಾರ ಕೆಂದ್ರದಲ್ಲಿ ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಂಡಿದೆ.
ಈ ಹಿನ್ನಲೆಯಲ್ಲಿ ಕೇಂದ್ರ ಸರಕಾರದ ಸಾಧನೆಯನ್ನು ಜನರಿಗೆ ತಿಳಿಸಿಕೊಡುವ ನಿಟ್ಟಿನಲ್ಲಿ ದೇಶಾದ್ಯಂತ ವಿಡಿಯೋ ಕಾನ್ಫೆರೆನ್ಸ್ ಗಳನ್ನು ನಡೆಸಲಾಗುತ್ತಿದೆ.
ಈ ಹಿನ್ನಲೆಯಲ್ಲಿ ಇದೀಗ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ. ನಡ್ಡಾ ಅವರು ‘ಕರ್ನಾಟಕ ಜನಸಂವಾದ Rallyಯಲ್ಲಿ’ ವಿಡಿಯೋ ಕಾನ್ಫೆರೆನ್ಸ್ ಮೂಲಕ ಮಾತನಾಡುತ್ತಿದ್ದಾರೆ.
ನಡ್ಡಾ ಅವರು ತಮ್ಮ ಭಾಷಣದಲ್ಲಿ ನರೇಂದ್ರ ಮೋದಿ ಸರಕಾರದ ಸಾಧನೆಗಳು, ಕೋವಿಡ್ ತಡೆ ವಿಚಾರದಲ್ಲಿ ಕೇಂದ್ರ ಸರಕಾರದ ಪರಿಣಾಮಕಾರಿ ಹೆಜ್ಜೆಗಳ ಕುರಿತಾಗಿ ಮಾಹಿತಿಯನ್ನು ನೀಡುತ್ತಿದ್ದಾರೆ.
ಕೋವಿಡ್ ನಿರ್ಬಂಧ ಮಾರ್ಗಸೂಚಿಗಳು ದೇಶಾದ್ಯಂತ ಜಾರಿಯಲ್ಲಿರುವ ಕಾರಣದಿಂದ ಭಾರತೀಯ ಜನತಾ ಪಕ್ಷವು ಕೇಂದ್ರದಲ್ಲಿ ತನ್ನ ಸರಕಾರದ ಸಾಧನೆಗಳನ್ನು ದೇಶವಾಸಿಗಳಿಗೆ ತಿಳಿಸಲು ಸಂಪೂರ್ಣವಾಗಿ ಡಿಜಿಟಲ್ ಮಾಧ್ಯಮದ ಮೊರೆ ಹೋಗಿದೆ.