Advertisement

ಕಾಂಗ್ರೆಸ್‌ನ ಪೇ ಸಿಎಂ ಅಭಿಯಾನಕ್ಕೆ ಬಿಜೆಪಿ ಪಕ್ಷ ಹೆದರದು: ವಿಜಯೇಂದ್ರ

09:08 PM Sep 24, 2022 | Team Udayavani |

ಬೆಂಗಳೂರು: ಕಾಂಗ್ರೆಸ್‌ನ “ಪೇ ಸಿಎಂ’ ಅಭಿಯಾನವನ್ನು ಬಿಜೆಪಿ ಸಮರ್ಥವಾಗಿ ಎದುರಿಸಲಿದೆ. ಅದಕ್ಕೆ ನಾವು ಹೆದರಿಕೊಂಡಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.

Advertisement

ಶನಿವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶದಲ್ಲಿ ಭ್ರಷ್ಟಾಚಾರದ ಆಡಳಿತ ನೀಡಿರುವ ಕಾಂಗ್ರೆಸ್‌ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವಂತಹ ನೈತಿಕತೆಯೇ ಇಲ್ಲ. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಯುಪಿಎ ಆಡಳಿತ ಅವಧಿಯಲ್ಲಿ ಕಲ್ಲಿದ್ದಲು ಹಗರಣ, 2 ಜಿ ಹಗರಣ, ಕಾಮನ್‌ವೆಲ್ತ್‌ ಕ್ರೀಡಾಕೂಟ ಹಗರಣ ಮುಂತಾದವುಗಳಿಂದ ಕೋಟ್ಯಂತರ ರೂ. ಕೊಳ್ಳೆ ಹೊಡೆದಿದ್ದಾರೆ. ಅಂಥವರು ಈಗ ಪೇ ಸಿಎಂ ಅಭಿಯಾನ ಆರಂಭಿಸಿದ್ದಾರೆ ಎಂದು ಲೇವಡಿ ಮಾಡಿದರು.

ಯತ್ನಾಳ್‌ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಯತ್ನಾಳ್‌ ನಾನು ಫ್ರೆಂಡ್‌. ಹಾಗಾಗಿ ಆಗಾಗ ವಿಜಯೇಂದ್ರನ ಬಗ್ಗೆ ಮಾತನಾಡುತ್ತಾರೆ ಎಂದು ಚಟಾಕಿ ಹಾರಿಸಿದರು.

ವರಿಷ್ಠರ ತೀರ್ಮಾನದಂತೆ ಸ್ಪರ್ಧೆ
ಬಿಜೆಪಿಯ ವರಿಷ್ಠರು ಯಾವ ಟಾಸ್ಕ್ ನೀಡುತ್ತಾರೋ ಅದನ್ನು ಯಶಸ್ವಿಯಾಗಿ ನಿರ್ವಹಿಸಲು ಸಿದ್ಧನಿದ್ದೇನೆ. ಈಗಾಗಲೇ ಹಲವು ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದೇನೆ. ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸಲಿದ್ದಾರೆ.
– ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next