Advertisement

ನನಗೆ ಸಚಿವ ಸ್ಥಾನ, 30ಕೋಟಿ ರೂ ಆಮಿಷ ನೀಡಲಾಗಿತ್ತು: ಹೆಬ್ಬಾಳ್‌ಕರ್‌

03:41 PM Sep 28, 2018 | |

 ಬೆಳಗಾವಿ: ನನಗೆ ಬಿಜೆಪಿ ಸೇರ್ಪಡೆಯಾಗುವಂತೆ ಸಚಿವ ಸ್ಥಾನ ಮತ್ತು 30 ಕೋಟಿ ರೂಪಾಯಿ ಆಮಿಷ ಒಡ್ಡಲಾಗಿತ್ತು ಎಂದು ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳ್‌ಕರ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. 

Advertisement

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ. ಆದರೆ ಆಫ‌ರ್‌ ನೀಡಿದ ಬಿಜೆಪಿ ನಾಯಕರ ಹೆಸರು ಹೇಳಲು ನಿರಾಕರಿಸಿದರು. 

ಆಪರೇಷನ್‌ ಕಮಲ ನಿಸರ್ಗಕ್ಕೆ ವಿರುದ್ಧವಾದದ್ದು ಎಂದ ಅವರು ಈಗಾಗಲೇ ಹಲವು ಶಾಸಕರಿಗೆ ಆಫ‌ರ್‌ ನೀಡಲಾಗಿತ್ತು, ನನ್ನನ್ನು ಸಂಪರ್ಕಿಸಿದ್ದರು. ಈ ವಿಚಾರವನ್ನು ಪಕ್ಷದ ನಾಯಕರ ಗಮನಕ್ಕೆ ತರಲಾಗಿತ್ತು ಎಂದರು. 

 ಜಾರಕಿಹೊಳಿ ಸಹೋದರರ ನಡುವಿನ ಭಿನ್ನಾಭಿಪ್ರಾಯದ ವಿಚಾರ ಒಂದು ಹಂತಕ್ಕೆ ತಣ್ಣಗಾಯಿತು ಎನ್ನುವ ವೇಳೆ ಸತೀಶ್‌ ಜಾರಕಿಹೊಳಿ ಆಪ್ತ ಸಹಾಯಕನ ಮೇಲೆ ಲಕ್ಷ್ಮೀ ಹೆಬ್ಬಾಳ್‌ಕರ್‌ ಬೆಂಬಲಿಗ ಇರಿತ ನಡೆಸಿದ್ದ.

Advertisement

Udayavani is now on Telegram. Click here to join our channel and stay updated with the latest news.

Next