Advertisement

BJP ಕಚೇರಿ ಕೆಲಸಕ್ಕೆ ಬಾರದವರು ನಡೆಸುತ್ತಿದ್ದಾರೆ: ರೇಣುಕಾಚಾರ್ಯ

11:10 PM Sep 01, 2023 | Team Udayavani |

ಬೆಂಗಳೂರು: ಪಕ್ಷದ ನಾಯ ಕರ ವಿರುದ್ಧ ಆಕ್ರೋಶ ಮುಂದುವರಿಸಿರುವ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ, ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಹೆಸರು ಪ್ರಸ್ತಾಪಿಸದೇ ಕಿಡಿಕಾರಿದ್ದಾರೆ.

Advertisement

ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಕೆಲಸಕ್ಕೆ ಬಾರದವರು ಬಿಜೆಪಿಯನ್ನು ನಡೆಸುತ್ತಿದ್ದಾರೆ. ಈಗ ಬಿಜೆಪಿ ಯನ್ನು ನಡೆಸುವವರು ಲಿಂಗಾಯತರನ್ನು ವಿರೋಧಿಸುತ್ತಿದ್ದಾರೆ. ಜಗದೀಶ್‌ ಶೆಟ್ಟರ್‌, ಈಶ್ವರಪ್ಪ ಹಾಗೂ ಲಕ್ಷ್ಮಣ ಸವದಿಗೆ ಟಿಕೆ ಟ್‌ ತಪ್ಪಲು ಇವರೇ ಕಾರಣ ಎಂದರು.
ನಾನು ಪಕ್ಷ ಬಿಡುತ್ತೇನೆಂದು ಕೆಲವ ರಿಂದ ಇವರೇ ಹೇಳಿಕೆ ಕೊಡಿಸುತ್ತಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಇವರು ಕೊಟ್ಟ ಪ್ರಣಾಳಿಕೆಯೇ ಕಾರಣ. ಈಗ ಆತ್ಮಾವಲೋಕನ ಮಾಡಿಕೊಳ್ಳಬೇಕಿಲ್ಲ. ಸರ್ವಾಧಿಕಾರಿ ಧೋರಣೆ ಕೊನೆಯಾಗಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next