Advertisement

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

12:34 AM Sep 22, 2024 | Team Udayavani |

ಮಡಿಕೇರಿ: ಕುಶಾಲನಗರ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ಸಂಬಂಧಿಸಿ ಕಾನೂನಿನ ಚೌಕಟ್ಟಿನಡಿಯಲ್ಲಿ ಕಾರ್ಯನಿರ್ವಹಿಸು ತ್ತಿರುವ ತಹಶೀಲ್ದಾರರನ್ನು ನಿಂದಿಸಿರುವ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರ ನಡೆಯನ್ನು ತೀವ್ರವಾಗಿ ಖಂಡಿಸುವುದಾಗಿ ಜಿಲ್ಲಾ ಕಾಂಗ್ರೆಸ್‌ನ ಐಎನ್‌ಟಿಯುಸಿ ಜಿಲ್ಲಾಧ್ಯಕ್ಷ ಬಿ.ಡಿ.ಅಣ್ಣಯ್ಯ ತಿಳಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಶಾಲನಗರ ಪುರಸಭೆಗೆ ನಾಮನಿರ್ದೇಶಿತ ಇಬ್ಬರು ಸದಸ್ಯರಿಗೆ ನಿಯಮಾನುಸಾರ ಮತ ಚಲಾಯಿಸುವ ಹಕ್ಕು ಇದೆ. ಈ ವಿಚಾರದಲ್ಲಿ ಕಾನೂನಿನ ಆದೇಶದಂತೆ ತಹಶೀಲ್ದಾರ್‌ ನಡೆದುಕೊಂಡಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next