Advertisement

ಬಿಜೆಪಿ ಪರಿವರ್ತನಾ ಯಾತ್ರೆ ಭೂಮಿ ಪೂಜೆ ಇಂದು

07:30 AM Oct 22, 2017 | |

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಹಮ್ಮಿಕೊಳ್ಳುತ್ತಿರುವ ನವ ಕರ್ನಾಟಕ ಪರಿವರ್ತನಾ ರಥಯಾತ್ರೆ ನ.2ರಿಂದ ತುಮಕೂರು ರಸ್ತೆಯ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಆರಂಭವಾಗಲಿದೆ.

Advertisement

ಈ ಹಿನ್ನೆಲೆಯಲ್ಲಿ ವಸ್ತು ಪ್ರದರ್ಶನ ಕೇಂದ್ರದಲ್ಲಿ ಭಾನುವಾರ ಬೆಳಗ್ಗೆ 10ಗಂಟೆಗೆ ಭೂಮಿಪೂಜೆ ಹಮ್ಮಿಕೊಳ್ಳಲಾಗಿದೆ. ಪರಿವರ್ತನಾ ಯಾತ್ರೆ ಉದ್ಘಾಟನೆ ಸಲುವಾಗಿ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶಕ್ಕೆ ರಾಜ್ಯದ ಅರ್ಧಭಾಗದಿಂದ ಬೈಕ್‌ ರ್ಯಾಲಿ ಆಗಮಿಸಲಿದೆ. ಈ ಹಿನ್ನೆಲೆಯಲ್ಲಿ ವೇದಿಕೆ ನಿರ್ಮಾಣ ಕಾರ್ಯಕ್ಕೆ ಭೂಮಿಪೂಜೆ ಹಮ್ಮಿಕೊಳ್ಳಲಾಗಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರರಾವ್‌, ರ್ಯಾಲಿಯ ಬೆಂಗಳೂರು ಉಸ್ತುವಾರಿಯಾಗಿರುವ ವಿಧಾನಸಭೆ ಪ್ರತಿಪಕ್ಷ ಉಪನಾಯಕ ಆರ್‌.ಅಶೋಕ್‌, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳೂ ಆಗಿರುವ ಎನ್‌. ರವಿಕುಮಾರ್‌, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಅರವಿಂದ ಲಿಂಬಾವಳಿ, ಸಂಸದರು, ಶಾಸಕರು ಪಾಲ್ಗೊಳ್ಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next