Advertisement

ವ್ಯಕ್ತಿಗಿಂತ ದೇಶ ಮೊದಲು, ಬೆಂಬಲಿಗರ ಮನವೊಲಿಸಿದ ತೇಜಸ್ವಿನಿ ಅನಂತ್ ಕುಮಾರ್

09:19 AM Mar 29, 2019 | Nagendra Trasi |

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ತಪ್ಪಿದ್ದು ಹೇಗೆ ಎಂದು ಗೊತ್ತಿಲ್ಲ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

Advertisement

ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ತೇಜಸ್ವಿ ಸೂರ್ಯ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಅಂತಿಮಗೊಳಿಸಿದೆ. ಈ ಹಿನ್ನೆಲೆಯಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಬೆಂಬಲಿಗರು, ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

ವ್ಯಕ್ತಿಗಿಂತ ದೇಶ ಮೊದಲು; ಬೆಂಬಲಿಗರ ಮನವೊಲಿಸಿದ ತೇಜಸ್ವಿನಿ

ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಕೊನೆ ಕ್ಷಣದಲ್ಲಿ ಟಿಕೆಟ್ ಕೈತಪ್ಪಿರುವುದಕ್ಕೆ ದಿ.ಅನಂತ್ ಕುಮಾರ್ ಹಾಗೂ ತೇಜಸ್ವಿನಿ ಅನಂತ್ ಕುಮಾರ್ ಅವರ ಬೆಂಬಲಿಗರು ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ತೇಜಸ್ವಿ ಅನಂತ್ ಕುಮಾರ್ ಅವರ ನಿವಾಸಕ್ಕೆ ಆಗಮಿಸಿ ಮಾತುಕತೆ ನಡೆಸಿ ಆಶೀರ್ವಾದ ಪಡೆದರು.

Advertisement

ನಂತರ ಅಸಮಧಾನಗೊಂಡಿದ್ದ ಪಕ್ಷದ ಕಾರ್ಯಕರ್ತರು, ಬೆಂಬಲಿಗರನ್ನು ಸಮಾಧಾನಪಡಿಸಿ ಮನವೊಲಿಸಿದರು. ನಮಗೆ ವ್ಯಕ್ತಗಿಂತ ದೇಶ ಮೊದಲು, ಪಕ್ಷದ ಹೈಕಮಾಂಡ್ ತೀರ್ಮಾನವನ್ನು ನಾವು ಗೌರವಿಸಬೇಕು. ಪಕ್ಷದ ತೀರ್ಮಾನಕ್ಕೆ ಬದ್ಧರಾಗಿ ನಮ್ಮ ಅಭ್ಯರ್ಥಿ ಪರ ಪ್ರಚಾರ ನಡೆಸಬೇಕು ಎಂದು ಸುದ್ದಿಗಾರರ ಜೊತೆ ಮಾತನಾಡುತ್ತ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next