Advertisement

ಜಾತಿ ಹೆಸರಿನಲ್ಲಿ ಬಿಜೆಪಿ ರಾಜಕಾರಣ: ಶಿವರಾಜ ತಂಗಡಗಿ

11:12 PM Mar 26, 2023 | Team Udayavani |

ಕನಕಗಿರಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ನೀಡಿದ್ದ ಬೇಡಿಕೆಗಳನ್ನು ಈಡೇರಿಸುವುದರ ಮೂಲಕ ನುಡಿದಂತೆ ನಡೆದಿದೆ. ಈ ಬಾರಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ಅನಂತರ ಈಗಾಗಲೇ ಬಿಡುಗಡೆಗೊಳಿಸಿದ ನಾಲ್ಕು ಯೋಜನೆಗಳನ್ನು ಈಡೇರಿಸಿ ಕೊಟ್ಟ ಮಾತು ಉಳಿಸಿಕೊಳ್ಳುತ್ತದೆ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಹೇಳಿದರು.

Advertisement

ಬಸರಿಹಾಳ, ಅಡವಿಬಾವಿ, ಹುಲಸನಹಟ್ಟಿ, ನಾಗಲಾಪುರ, ಬೈಲಕಂಪುರ ಗ್ರಾಮದಲ್ಲಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಆಯೋಜಿಸಿದ್ದ ಮನೆ-ಮನ ತಲುಪೋಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ-ಕೇಂದ್ರದಲ್ಲಿರುವ ಬಿಜೆಪಿ ಸರಕಾರ ಜಾತಿಯ ಹೆಸರಿನಲ್ಲಿ ರಾಜಕಾರಣ ಮಾಡುವುದರ ಜತೆಗೆ ಜಾತಿ-ಜಾತಿಗಳ ನಡುವೆ ಕೋಮು ಸೃಷ್ಟಿ ಮಾಡುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next