Advertisement

ಮತದಾರರ ವಿಶ್ವಾಸ ಗಳಿಸಿ ಚುನಾವಣೆ ಎದುರಿಸಿ : ಗೋವಾದಲ್ಲಿ ಜೆ.ಪಿ ನಡ್ಡಾ ಕಿವಿಮಾತು

09:16 PM Jul 24, 2021 | Team Udayavani |

ಪಣಜಿ: ಜನತೆಯೊಂದಿಗೆ ಉತ್ತಮ ಸಂಬಂಧವಿಟ್ಟುಕೊಳ್ಳಿ, ಮತದಾರರ ವಿಶ್ವಾಸ ಗಳಿಸಿಕೊಂಡು ಚುನಾವಣೆ ಎದುರಿಸಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಬಿಜೆಪಿ ರಾಜ್ಯ ನಾಯಕರಿಗೆ ಕಿವಿಮಾತು ಹೇಳಿದರು.

Advertisement

2022 ರಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶನಿವಾರ ಗೋವಾಕ್ಕೆ ಆಗಮಿಸಿರುವ ನಡ್ಡಾ, ಪಣಜಿಯ ಖಾಸಗಿ ಹೋಟೆಲ್‍ನಲ್ಲಿ ಪಕ್ಷದ ರಾಜ್ಯ ನಾಯಕರೊಂದಿಗೆ ಸಭೆ ನಡೆಸಿದರು.

ಗೋವಾ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಗೋವಾದ ವಿವಿಧ ಮತಕ್ಷೇತ್ರಗಳಲ್ಲಿ ಚುನಾವಣೆಯ ಪೂರ್ವಸಿದ್ದತಾ ಕಾರ್ಯಗಳಿಗೆ ಚಾಲನೆ ನೀಡಬೇಕು ಎಂದು ಅವರು ಕಾರ್ಯಕರ್ತರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಗೋವಾ ಬಿಜೆಪಿ ಪ್ರಭಾರಿ ಸಿ.ಟಿ ರವಿ, ಮುಖ್ಯಮಂತ್ರಿ ಪ್ರಮೋದ ಸಾವಂತ್, ಕೇಂದ್ರ ಸಚಿವ ಶ್ರೀಪಾದ ನಾಯ್ಕ, ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ವೇದಿಕೆಯ ಮೇಲೆ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next